AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ ಸದ್ಯ! ದೇಶದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಯ್ತು..

ದೆಹಲಿ: ರಣಹಂತಕ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಹೆಚ್ಚಿಸುತ್ತಲೇ ಬಂದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಆದರೆ ಇದೇ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಒಟ್ಟು ಜನರ ಸಂಖ್ಯೆ ಏಕಾಏಕಿ ಹೆಚ್ಚಿದೆ. ಹೆಚ್‌ಟಿಯ ಕೋವಿಡ್ -19 ಡ್ಯಾಶ್‌ಬೋರ್ಡ್ ಪ್ರಕಾರ, ಮಂಗಳವಾರ ಸಂಜೆಯ ವರೆಗೆ, ಸೋಂಕಿತ ರೋಗಿಗಳಿಗಿಂತ 1,375 ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ವರದಿಯಾಗಿದೆ. ಕಳೆದ ವಾರದಲ್ಲಿ, ರಾಷ್ಟ್ರೀಯ ಸರಾಸರಿಯಲ್ಲಿ ಪ್ರತಿದಿನ ಸುಮಾರು 4,529 ಹೊಸ ಸಕ್ರಿಯ ಪ್ರಕರಣಗಳನ್ನು […]

ಅಬ್ಬಾ ಸದ್ಯ! ದೇಶದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ ಅಧಿಕವಾಯ್ತು..
ಆಯೇಷಾ ಬಾನು
|

Updated on:Jun 11, 2020 | 3:58 PM

Share

ದೆಹಲಿ: ರಣಹಂತಕ ಕೊರೊನಾ ವೈರಸ್ ದಿನೇ ದಿನೆ ತನ್ನ ಅಟ್ಟಹಾಸವನ್ನು ಹೆಚ್ಚಿಸುತ್ತಲೇ ಬಂದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ಅಧಿಕವಾಗುತ್ತಲೇ ಇದೆ. ಆದರೆ ಇದೇ ಮೊದಲ ಬಾರಿಗೆ ಕೊರೊನಾದಿಂದ ಗುಣಮುಖರಾದವರ ಒಟ್ಟು ಜನರ ಸಂಖ್ಯೆ ಏಕಾಏಕಿ ಹೆಚ್ಚಿದೆ.

ಹೆಚ್‌ಟಿಯ ಕೋವಿಡ್ -19 ಡ್ಯಾಶ್‌ಬೋರ್ಡ್ ಪ್ರಕಾರ, ಮಂಗಳವಾರ ಸಂಜೆಯ ವರೆಗೆ, ಸೋಂಕಿತ ರೋಗಿಗಳಿಗಿಂತ 1,375 ಸೋಂಕಿನಿಂದ ಚೇತರಿಸಿಕೊಂಡ ರೋಗಿಗಳ ಸಂಖ್ಯೆ ಹೆಚ್ಚಿದೆ ಎಂದು ವರದಿಯಾಗಿದೆ.

ಕಳೆದ ವಾರದಲ್ಲಿ, ರಾಷ್ಟ್ರೀಯ ಸರಾಸರಿಯಲ್ಲಿ ಪ್ರತಿದಿನ ಸುಮಾರು 4,529 ಹೊಸ ಸಕ್ರಿಯ ಪ್ರಕರಣಗಳನ್ನು ಸೇರಿಸಲಾಗುತ್ತಿತ್ತು. ಹಾಗೂ ಪ್ರತಿದಿನ 5,397 ರೋಗಿಗಳು ಸೋಂಕಿನಿಂದ ಗುಣಮುಖರಾಗುತ್ತಿದ್ದರು. ಇದೇ ಮಾದರಿಯಲ್ಲಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ಈ ಅಂತರವು ವಿಸ್ತರಿಸುವ ಸಾಧ್ಯತೆಯಿದೆ.

ಭಾರತದಲ್ಲಿ ಕೊರೊನಾ ಸೋಂಕಿತರು ಗುಣಮುಖರಾಗಲೂ ಮುಖ್ಯ ಕಾರಣ ಅಂದ್ರೆ ಇಲ್ಲಿ ಸಕ್ರಿಯ ಪ್ರಕರಣಗಳಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ. ಸೋಂಕಿತರಲ್ಲಿ 2.8% ಜನರು ಇಲ್ಲಿಯವರೆಗೆ ಸಾವನ್ನಪ್ಪಿರುವುದರಿಂದ, ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದೆ. ಹಾಗೂ ಕಳೆದ ತಿಂಗಳುಗಳಿಗೆ ಹೋಲಿಸಿದರೆ ಮೇ ತಿಂಗಳಲ್ಲಿ ಚೇತರಿಕೆ ಕಾಣಿತ್ತಿರುವವರ ಸಂಖ್ಯೆ ಹೆಚ್ಚಿದೆ.

ವಿಶೇಷವಾಗಿ ಮೇ ತಿಂಗಳಿನಲ್ಲಿ ವರದಿಯಾದ 155,668 ಹೊಸ ಪ್ರಕರಣಗಳು ಬಿಡುಗಡೆಯಾಗಲು ಪ್ರಾರಂಭಿಸಿದಾಗ ಚೇತರಿಕೆಯ ವೇಗವನ್ನು ಪಡೆದುಕೊಂಡಿತು. ಮೇ 29 ರಂದು ಭಾರತವು 11,707 ಹೊಸ ಚೇತರಿಕೆಕಂಡಿರುವುದರ ಬಗ್ಗೆ ವರದಿ ಮಾಡಿದೆ. ಮಹಾರಾಷ್ಟ್ರದ ಸಹಾಯದಿಂದ ಒಂದೇ ದಿನದಲ್ಲಿ 8,381 ರೋಗಲಕ್ಷಣವಿಲ್ಲದ ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ, ದೇಶದಲ್ಲಿ ನಡೆಸಿದ ಒಟ್ಟು ಪರೀಕ್ಷೆಗಳ ಸಂಖ್ಯೆ 5 ಮಿಲಿಯನ್ ದಾಟಿದೆ. ಮಂಗಳವಾರ ರಾತ್ರಿಯ ಹೊತ್ತಿಗೆ, ಭಾರತ 5,061,332 ಮಾದರಿಗಳನ್ನು ಪರೀಕ್ಷಿಸಿದೆ.

Published On - 6:45 am, Thu, 11 June 20

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ