AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದಲ್ಲಿ ಬುರ್ಖಾ ವಿವಾದ; ಮಹಿಳೆಯರು ಕಡಿಮೆ ಬಟ್ಟೆ ತೊಟ್ಟರೆ ಸಮಸ್ಯೆಯಾಗುತ್ತೆ ಎಂದ ಗೃಹ ಸಚಿವ ಮಹಮೂದ್ ಅಲಿ

ಕೆಲವು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರು ಇದನ್ನು ಮಾಡುತ್ತಿರಬಹುದು.  ಆದರೆ ನಮ್ಮ ನೀತಿ ಸಂಪೂರ್ಣವಾಗಿ ಜಾತ್ಯತೀತವಾಗಿದೆ. ಜನರು ತಮಗೆ ಬೇಕಾದುದನ್ನು ಧರಿಸಬಹುದು. ಬುರ್ಖಾ ಧರಿಸುವಂತಿಲ್ಲ ಎಂದು ಎಲ್ಲಿಯೂ ಬರೆಯಲಾಗಿಲ್ಲ, ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಮಹಮೂದ್ ಅಲಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಬುರ್ಖಾ ವಿವಾದ; ಮಹಿಳೆಯರು ಕಡಿಮೆ ಬಟ್ಟೆ ತೊಟ್ಟರೆ ಸಮಸ್ಯೆಯಾಗುತ್ತೆ ಎಂದ ಗೃಹ ಸಚಿವ ಮಹಮೂದ್ ಅಲಿ
ಮಹಮೂದ್ ಅಲಿ
ರಶ್ಮಿ ಕಲ್ಲಕಟ್ಟ
|

Updated on: Jun 17, 2023 | 3:51 PM

Share

ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ಸಂತೋಷ್ ನಗರದ ಕೆವಿ ರಂಗಾ ರೆಡ್ಡಿ ಕಾಲೇಜಿನಲ್ಲಿ ಶನಿವಾರ ಉರ್ದು ಮಾಧ್ಯಮ ಪದವಿ ಪರೀಕ್ಷೆಗೆ ಹಾಜರಾಗಿದ್ದ ಕೆಲವು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವ ಮುನ್ನ ಬುರ್ಖಾ (Burqa Row)ತೆಗೆಯುವಂತೆ ಹೇಳಲಾಗಿದೆ. ಈ ಘಟನೆಯನ್ನು ತೆಲಂಗಾಣ(Telangana )ಗೃಹ ಸಚಿವ ಮಹಮೂದ್ ಅಲಿ (Mahmood Ali) ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅದೇ ವೇಳೆ ಮಹಿಳೆಯರು ಚಿಕ್ಕ ಉಡುಪುಗಳನ್ನು ಧರಿಸದಂತೆ ಎಚ್ಚರಿಕೆ ನೀಡಿದರು.

ಕೆಲವು ಮುಖ್ಯೋಪಾಧ್ಯಾಯರು ಅಥವಾ ಪ್ರಾಂಶುಪಾಲರು ಇದನ್ನು ಮಾಡುತ್ತಿರಬಹುದು.  ಆದರೆ ನಮ್ಮ ನೀತಿ ಸಂಪೂರ್ಣವಾಗಿ ಜಾತ್ಯತೀತವಾಗಿದೆ. ಜನರು ತಮಗೆ ಬೇಕಾದುದನ್ನು ಧರಿಸಬಹುದು. ಬುರ್ಖಾ ಧರಿಸುವಂತಿಲ್ಲ ಎಂದು ಎಲ್ಲಿಯೂ ಬರೆಯಲಾಗಿಲ್ಲ, ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಮಹಮೂದ್ ಅಲಿ ಹೇಳಿದ್ದಾರೆ.

ಪಾಶ್ಚಾತ್ಯ ಡ್ರೆಸ್ ಹಾಕಿಕೊಂಡರೆ ಸರಿಯಾಗುವುದಿಲ್ಲ. ನಾವು ಉತ್ತಮ ಬಟ್ಟೆಗಳನ್ನು ಧರಿಸಬೇಕು, ವಿಶೇಷವಾಗಿ ಮಹಿಳೆಯರು. ಮಹಿಳೆಯರು ಕಡಿಮೆ ಬಟ್ಟೆ ಧರಿಸಿದರೆ ಅದು ಸಮಸ್ಯೆಯಾಗಬಹುದು. ಹೆಚ್ಚು ಬಟ್ಟೆ ತೊಟ್ಟರೆ ಜನ ನೆಮ್ಮದಿಯಿಂದ ಇರುತ್ತಾರೆ ಎಂದು ಸಚಿವರು ಹೇಳಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮೊದಲು ನಮ್ಮ ಬುರ್ಖಾವನ್ನು ತೆಗೆಯುವಂತೆ ಕಾಲೇಜು ಅಧಿಕಾರಿಗಳು ಒತ್ತಾಯಿಸಿದರು. ಹೊರರೆ ಮಾತ್ರ ಬುರ್ಖಾ ಧರಿಸಿ ಎಂದು ಅವರು ಹೇಳಿರುವುದಾಗಿ ಪರೀಕ್ಷೆಗೆ ಬಂದ ಮಹಿಳಾ ವಿದ್ಯಾರ್ಥಿನಿಯೊಬ್ಬರು ಹೇಳಿದರು.

ಕೆವಿ ರಂಗಾ ರೆಡ್ಡಿ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ಕೆಲವು ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಯು ಬುರ್ಖಾ ಧರಿಸಿ ಬರದಂತೆ ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿದ್ದ ಕಾಲೇಜು ಸಿಬ್ಬಂದಿ ಬುರ್ಖಾ ತೆಗೆಯುವಂತೆ ಹೇಳಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ:Adah Sharma: ‘ಬುರ್ಖಾ ಧರಿಸಿದ ಬಳಿಕ ಯಶಸ್ಸು ಸಿಕ್ತು’; ಗ್ಲಾಮರಸ್ ಅದಾ ಶರ್ಮಾ ಬಗ್ಗೆ ಟೀಕೆ

ಈ ಗೊಂದಲದಲ್ಲಿ ಸುಮಾರು ಅರ್ಧ ಗಂಟೆ ಕಾಲ ಪರೀಕ್ಷೆಗೆ ಹಾಜರಾಗದಂತೆ ತಡೆದಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಕೆಲವು ವಿದ್ಯಾರ್ಥಿನಿಯರು ಬುರ್ಖಾ ತೆಗೆದು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದರು. ಈ ಘಟನೆಯ ನಂತರ ವಿದ್ಯಾರ್ಥಿನಿಯರ ಪೋಷಕರು ಈ ವಿಷಯದ ಬಗ್ಗೆ ಗೃಹ ಸಚಿವ ಮಹಮೂದ್ ಅಲಿ ಅವರಿಗೆ ದೂರು ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ