AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ

ಕೋಪದಲ್ಲಿ ಮಾಡಿದ ಒಂದು ತಪ್ಪು ಯುವತಿಯನ್ನು ಜೈಲಿನಲ್ಲಿ ಕಳೆಯುವಂತೆ ಮಾಡಿದೆ. ಮಣಿಪುರದ ಯುವತಿಯೊಬ್ಬಳು ತನ್ನ ಲಿವ್ ಇನ್ ಸಂಗಾತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಸಣ್ಣ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಯುವತಿ ಗೆಳೆಯನ ಜತೆ ಜಗಳವಾಡಿ ಕೋಪದಲ್ಲಿ ನೇರವಾಗಿ ಆತನ ಎದೆಗೆ ಇರಿದಿದ್ದಾಳೆ.

ನೋಯ್ಡಾ: ದಕ್ಷಿಣ ಕೊರಿಯಾದ ಗೆಳೆಯನನ್ನು ಬರ್ಬರವಾಗಿ ಹತ್ಯೆಗೈದ ಮಣಿಪುರದ ಗೆಳತಿ
ಮಣಿಪುರದ ಯುವತಿ ಪಮೈ
ನಯನಾ ರಾಜೀವ್
|

Updated on: Jan 05, 2026 | 9:26 AM

Share

ನೋಯ್ಡಾ, ಜನವರಿ 05: ಕ್ಷುಲ್ಲಕ ಕಾರಣಕ್ಕೆ ಮಣಿಪುರ(Manipur)ದ ಯುವತಿಯೊಬ್ಬಳು ತನ್ನ ಗೆಳೆಯನನ್ನು ಚಾಕುವಿನಿಂದ ಇರಿದು ಹತ್ಯೆ(Murder) ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಆಕೆಯ ಗೆಳೆಯ ದಕ್ಷಿಣ ಕೊರಿಯಾದವರಾಗಿದ್ದಾರೆ. ಇಬ್ಬರ ನಡುವೆ ಯಾವುದೋ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ. ಅದು ಅತಿರೇಕಕ್ಕೇರಿ ಆಕೆ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾಳೆ. ನೋಯ್ಡಾದಲ್ಲಿ ತನ್ನ ಫ್ಲಾಟ್​ನಲ್ಲಿ ಗೆಳೆಯನನ್ನು ಹತ್ಯೆ ಮಾಡಿದ್ದಾಳೆ.

ಮೃತ ವ್ಯಕ್ತಿಯನ್ನು ಡಕ್ ಹೀ ಯುಹ್ ಎಂದು ಗುರುತಿಸಲಾಗಿದೆ. ಆತನಿಗೆ ಇರಿದ ಸ್ವಲ್ಪ ಹೊತ್ತಲ್ಲೇ ಆಕೆಯೇ ಡಕ್​ನನ್ನು ಜಿಮ್ಸ್​ ಆಸ್ಪತ್ರೆಗೆ ಕರೆತಂದಿದ್ದಳು. ಕೂಡಲೇ ಆಸ್ಪತ್ರೆ ಸಿಬ್ಬಂದಿ ನಾಲೆಡ್ಜ್​ ಪಾರ್ಕ್​ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಲುಂಜೀನಾ ಪಮೈ ಎಂದು ಗುರುತಿಸಲಾದ ಆರೋಪಿಯು ವಿಚಾರಣೆಯ ಸಮಯದಲ್ಲಿ ತನಿಖಾಧಿಕಾರಿಗಳಿಗೆ ಕೆಲವು ಮಾಹಿತಿ ನೀಡಿದ್ದಾಳೆ. ಡಕ್ ಹೀ ಮದ್ಯ ಸೇವಿಸಿದ ನಂತರ ಆಗಾಗ ತನ್ನ ಮೇಲೆ ಹಲ್ಲೆ ನಡೆಸುತ್ತಿದ್ದ, ತಾನು ಹತಾಷಳಾಗಿದ್ದೆ ಎಂದು ತಿಳಿಸಿದ್ದಾಳೆ.

ಮತ್ತಷ್ಟು ಓದಿ: ಮದುವೆಗೆ ಒಪ್ಪದಿದ್ದಕ್ಕೆ ಮಹಿಳೆ ಕೊಲೆ ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ಇಬ್ಬರೂ ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್​ಮೆಂಟ್​ನಲ್ಲಿ ವಾಸಿಸುತ್ತಿದ್ದರು. ಡಕ್ ಹೀ ಮೊಬೈಲ್ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಕೊಲೆಯಾದ ದಿನದಂದು ಮದ್ಯಪಾನ ಮಾಡುತ್ತಿದ್ದಾಗ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ. ಆ ಕ್ಷಣದಲ್ಲಿ ಪಮೈ ಗೆಳಯನ ಎದೆಗೆ ಚಾಕುವಿನಿಂದ ಇರಿದಿದ್ದಾಳೆ. ನಂತರ ಆಕೆಗೆ ತನ್ನ ತಪ್ಪಿನ ಅರಿವಾಗಿ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಳು.

ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕುಡಿದ ನಂತರ ತನ್ನ ಗೆಳೆಯ ಹಿಂಸಾತ್ಮಕವಾಗಿ ವರ್ತಿಸುತ್ತಿದ್ದರಿಂದ ಕಪದಲ್ಲಿ ತಾನು ಅವನಿಗೆ ಇರಿದಿದ್ದೇನೆ ಎಂದು ಆಕೆ ಒಪ್ಪಿಕೊಂಡಿದ್ದಾಳೆ. ಅವನನ್ನು ಕೊಲ್ಲುವುದು ತನ್ನ ಉದ್ದೇಶವಾಗಿರಲಿಲ್ಲ ಎಂದು ಆಕೆ ಪೊಲೀಸರಿಗೆ ಹೇಳಿಕೊಂಡಿದ್ದಾಳೆ.

ಇರಿತದ ಗಾಯಗಳ ನಿಖರ ಸಂಖ್ಯೆ ಮತ್ತು ಸಾವಿಗೆ ನಿಖರವಾದ ಕಾರಣವನ್ನು ದೃಢೀಕರಿಸಲು ಅಧಿಕಾರಿಗಳು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಭಾನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ