AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ

ಅಮೆರಿಕ ಈಗಾಗಲೇ ಘೋಷಿಸಿರುವಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು ಸ್ಥಗಿತಗೊಳಿಸುತ್ತದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವರದಿಗಳ ಬಗ್ಗೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಬಹು ಇಂಧನ ಮೂಲಗಳನ್ನು ನಿರ್ವಹಿಸುತ್ತದೆ. ಭಾರತಕ್ಕೆ ರಷ್ಯಾ ಅಥವಾ ಬೇರಾವುದೋ ಒಂದೇ ದೇಶದಿಂದ ಇಂಧನ ಪೂರೈಕೆಯಾಗುವುದಿಲ್ಲ. ರಾಷ್ಟ್ರೀಯ ಹಿತಾಸಕ್ತಿಯು ಎಲ್ಲಾ ತೈಲ ಖರೀದಿಗಳಿಗೆ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದ್ದಾರೆ.

ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ
vikram Misri Image Credit source: PTI
TV9 Web
| Edited By: |

Updated on:Feb 09, 2026 | 10:22 PM

Share

ನವದೆಹಲಿ, ಫೆಬ್ರವರಿ 9: ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ (Trade Deal) ಭಾಗವಾಗಿ ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಿದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವಿವಾದದ ನಡುವೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯಾವುದೇ ಒಂದು ಇಂಧನ ಪೂರೈಕೆದಾರರನ್ನು ಅವಲಂಬಿಸುವ ಬದಲು ಹಲವು ಇಂಧನ ಆಮದುಗಳ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರವಾಗಿದೆ. ಭಾರತವು ಕೇವಲ ರಷ್ಯಾದಿಂದ ಮಾತ್ರವಲ್ಲ, ಇತರೆ ಡಜನ್​ಗಟ್ಟಲೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ನಂತರ ನವದೆಹಲಿ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುತ್ತದೆಯೇ ಎಂಬ ಪ್ರಶ್ನೆಗಳು ಮುಂದುವರಿದಿದ್ದರೂ ಸಹ, ತನ್ನ ಇಂಧನ ಆಮದು ನೀತಿಯು ರಾಷ್ಟ್ರೀಯ ಹಿತಾಸಕ್ತಿ, ಗ್ರಾಹಕರ ಕೈಗೆಟುಕುವಿಕೆ ಮತ್ತು ಪೂರೈಕೆ ಸುರಕ್ಷತೆಯಿಂದ ಮಾರ್ಗದರ್ಶಿಸಲ್ಪಟ್ಟಿದೆ ಎಂದು ವಿಕ್ರಮ್ ಮಿಶ್ರಿ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

“ಭಾರತವು ರಷ್ಯಾದ ಕಚ್ಚಾ ತೈಲವನ್ನು ಹೇಗೆ ಪಡೆಯುತ್ತಿದೆ ಎಂಬುದರ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆ ಮತ್ತು ತೈಲ ಮತ್ತು ಅನಿಲದ ಪ್ರಮುಖ ನಿವ್ವಳ ಆಮದುದಾರ ರಾಷ್ಟ್ರವಾಗಿ ಭಾರತವು ಸ್ಥಿರ ಮತ್ತು ಕೈಗೆಟುಕುವ ಇಂಧನ ಪೂರೈಕೆಗೆ ಆದ್ಯತೆ ನೀಡಬೇಕು” ಎಂದು ಹೇಳಿದ್ದಾರೆ. ನಮ್ಮ ದೇಶ ಬೇರೆ ದೇಶದಿಂದ ಆಮದು ಮಾಡಿಕೊಂಡ ಇಂಧನದ ಮೇಲೆ ಶೇ. 80-85ರಷ್ಟು ಅವಲಂಬಿತರಾಗಿರುವಾಗ ಇಂಧನ ವೆಚ್ಚಗಳಿಂದ ಉಂಟಾಗುವ ಹಣದುಬ್ಬರದ ಬಗ್ಗೆ ಕಳವಳಗಳು ಸಹಜ. ಹೀಗಾಗಿ, ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿ ಉಳಿದಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸ್ವತಂತ್ರವಾಗಿದೆ, ವೆನೆಜುವೆಲಾದ ತೈಲ ಖರೀದಿ ಕುರಿತು ರಷ್ಯಾ ಮಾತು

ಭಾರತವು ರಷ್ಯಾದ ತೈಲ ಖರೀದಿಯನ್ನು ಮುಂದುವರಿಸುವುದಿಲ್ಲ ಎಂಬ ಷರತ್ತಿನ ಮೇಲೆ ಭಾರತೀಯ ರಫ್ತಿನ ಮೇಲಿನ ಶೇ. 25ರಷ್ಟು ದಂಡದ ಸುಂಕವನ್ನು ತೆಗೆದುಹಾಕುವ ಆದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೊರಡಿಸಿದ್ದರು. ಇದಾದ ನಂತರ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ ಭಾರತದ ಮೊದಲ ಅಧಿಕಾರಿ ವಿಕ್ರಮ್ ಮಿಶ್ರಿ.

“ನಾವು ಯಾವುದೇ ಒಂದು ಮೂಲದ ಮೇಲೆ ಅವಲಂಬಿತವಾಗಿಲ್ಲ ಅಥವಾ ಅವಲಂಬಿತರಾಗಲು ಉದ್ದೇಶಿಸಿಲ್ಲ. ಮಾರುಕಟ್ಟೆಯ ಪರಿಸ್ಥಿತಿಗಳನ್ನು ಅವಲಂಬಿಸಿ ಮೂಲಗಳ ಮಿಶ್ರಣವು ಕಾಲಕಾಲಕ್ಕೆ ಬದಲಾಗಬಹುದು. ಹೆಚ್ಚಿನ ವೈವಿಧ್ಯೀಕರಣವು ಇಂಧನ ಸುರಕ್ಷತೆಯನ್ನು ಹೆಚ್ಚಿಸುತ್ತದೆ” ಎಂದು ಮಿಶ್ರಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Mon, 9 February 26

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು