AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುತ್ತಾ ಆಟೋ ಹತ್ತಿ ವಿದೇಶಿ ಪ್ರವಾಸಿಗರನ್ನು ಬೆನ್ನುಹತ್ತಿ ಹೋದ ಬಾಲಕಿಯರು

ದೆಹಲಿಯಲ್ಲಿ ಇಬ್ಬರು ಬಾಲಕಿರು ವಿದೇಶಿ ಪ್ರವಾಸಿಗರ ಹಿಂದೆ ಹಣಕ್ಕಾಗಿ ಓಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿದೇಶಿ ಪ್ರಜೆಗಳು ದೆಹಲಿ ಪ್ರವಾಸಿಗರಿಗೆ ಅಸುರಕ್ಷಿತವಾಗಿದೆ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ.

ಭಿಕ್ಷೆ ಬೇಡುತ್ತಾ ಆಟೋ ಹತ್ತಿ ವಿದೇಶಿ ಪ್ರವಾಸಿಗರನ್ನು ಬೆನ್ನುಹತ್ತಿ ಹೋದ ಬಾಲಕಿಯರು
ಆಟೋ
ನಯನಾ ರಾಜೀವ್
|

Updated on: Jul 19, 2024 | 11:44 AM

Share

ಇಬ್ಬರು ಬಾಲಕಿಯರು ಭಿಕ್ಷೆ ಬೇಡುತ್ತಾ ವಿದೇಶಿ ಪ್ರವಾಸಿಗರಿದ್ದ ಆಟೋಹತ್ತಿ 150 ಮೀಟರ್​ನಷ್ಟು ದೂರ ಹೋಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಬಾಲಕಿಯರು ನಡೆದುಕೊಂಡಿರುವ ರೀತಿಗೆ ವಿದೇಶಿ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರವಾಸಿಗರು ಅಸುರಕ್ಷಿತರಾಗಿದ್ದಾರೆ ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹೊರಬಿದ್ದಿದ್ದು ಅದರಲ್ಲಿ ಮನೆ, ಗೊತ್ತುಗುರಿ ಇಲ್ಲದ ಇಬ್ಬರು ಬಾಲಕಿಯರು ವಿದೇಶಿ ಪ್ರವಾಸಿಗರಿದ್ದ ಇ-ಆಟೋವನ್ನು ಹತ್ತಿ ಸುಮಾರು 150 ಮೀಟರ್​ ದೂರ ಹೋಗಿದ್ದಾರೆ. ಅವರಿಗೆ ಹಣ ಕೊಡುವಂತೆ ಪೀಡಿಸಿದ್ದಾರೆ.

ಅವರು ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ, ಒಬ್ಬಳು ಆಟೋ ಹತ್ತಿಕೊಂಡಿದ್ದರೆ ಇನ್ನೊಬ್ಬಳು ಕೂಡ ಆಟೋ ಹತ್ತಲು ಪ್ರಯತ್ನಿಸುತ್ತಿದ್ದುದು ಕಂಡುಬಂದಿತ್ತು. ಹಣ ಕೊಡುವುದಿಲ್ಲ ಎಂದ ಮೇಲೂ ಅವರನ್ನು ಪೀಡಿಸಿದ್ದಾರೆ.

ಮತ್ತಷ್ಟು ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈಗಾಗಲೇ ಮಿಲಿಯನ್‌ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಈ ಬಾಲಕಿಯರು ಈ ರೀತಿ ನಡೆದುಕೊಳ್ಳುತ್ತಿದ್ದರೂ ಆಟೋ ಚಾಲಕ ಯಾವ ರೀತಿಯಲ್ಲೂ ಪ್ರತಿಕ್ರಿಯಿಸದಿರುವುದು ಮತ್ತಷ್ಟು ಬೇಸರದ ಸಂಗತಿಯಾಗಿದೆ.

ಆನ್​ಲೈನ್​ನಲ್ಲಿ ಇಂತಹ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿವೆ, ಕಳೆದ ವರ್ಷ ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಲಾಗಿದ್ದ ವಿಡಿಯೋವೊಂದರಲ್ಲಿ ರಸ್ತೆಯಲ್ಲಿ ನಿಂತಿದ್ದ ವಿದೇಶಿ ಪ್ರವಾಸಿಗನ ಬಳಿಕ ಭಿಕ್ಷುಕರು ಹಣಕ್ಕಾಗಿ ಅವರನ್ನು ಪೀಡಿಸಿ ಓಡಿಸಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿತ್ತು.

ದೆಹಲಿಯ ಬೀದಿಗಳಲ್ಲಿ ಸೂರಿಲ್ಲದ , ಬೀದಿ ಬದಿಯಲ್ಲಿ ವಾಸಿಸುವ ಸುಮಾರು 70,000 ಮಕ್ಕಳಿದ್ದಾರೆ, ಅವರಲ್ಲಿ ಅರ್ಧಕ್ಕಿಂತ ಹೆಚ್ಚುಮಂದಿ ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ