AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿಕ್ಷೆ ಬೇಡುತ್ತಾ ಆಟೋ ಹತ್ತಿ ವಿದೇಶಿ ಪ್ರವಾಸಿಗರನ್ನು ಬೆನ್ನುಹತ್ತಿ ಹೋದ ಬಾಲಕಿಯರು

ದೆಹಲಿಯಲ್ಲಿ ಇಬ್ಬರು ಬಾಲಕಿರು ವಿದೇಶಿ ಪ್ರವಾಸಿಗರ ಹಿಂದೆ ಹಣಕ್ಕಾಗಿ ಓಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವಿದೇಶಿ ಪ್ರಜೆಗಳು ದೆಹಲಿ ಪ್ರವಾಸಿಗರಿಗೆ ಅಸುರಕ್ಷಿತವಾಗಿದೆ ಎನ್ನುವ ಅಭಿಪ್ರಾಯಕ್ಕೆ ಬಂದಿದ್ದಾರೆ.

ಭಿಕ್ಷೆ ಬೇಡುತ್ತಾ ಆಟೋ ಹತ್ತಿ ವಿದೇಶಿ ಪ್ರವಾಸಿಗರನ್ನು ಬೆನ್ನುಹತ್ತಿ ಹೋದ ಬಾಲಕಿಯರು
ಆಟೋ
ನಯನಾ ರಾಜೀವ್
|

Updated on: Jul 19, 2024 | 11:44 AM

Share

ಇಬ್ಬರು ಬಾಲಕಿಯರು ಭಿಕ್ಷೆ ಬೇಡುತ್ತಾ ವಿದೇಶಿ ಪ್ರವಾಸಿಗರಿದ್ದ ಆಟೋಹತ್ತಿ 150 ಮೀಟರ್​ನಷ್ಟು ದೂರ ಹೋಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಬಾಲಕಿಯರು ನಡೆದುಕೊಂಡಿರುವ ರೀತಿಗೆ ವಿದೇಶಿ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಪ್ರವಾಸಿಗರು ಅಸುರಕ್ಷಿತರಾಗಿದ್ದಾರೆ ಎನ್ನುವ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹೊರಬಿದ್ದಿದ್ದು ಅದರಲ್ಲಿ ಮನೆ, ಗೊತ್ತುಗುರಿ ಇಲ್ಲದ ಇಬ್ಬರು ಬಾಲಕಿಯರು ವಿದೇಶಿ ಪ್ರವಾಸಿಗರಿದ್ದ ಇ-ಆಟೋವನ್ನು ಹತ್ತಿ ಸುಮಾರು 150 ಮೀಟರ್​ ದೂರ ಹೋಗಿದ್ದಾರೆ. ಅವರಿಗೆ ಹಣ ಕೊಡುವಂತೆ ಪೀಡಿಸಿದ್ದಾರೆ.

ಅವರು ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ, ಒಬ್ಬಳು ಆಟೋ ಹತ್ತಿಕೊಂಡಿದ್ದರೆ ಇನ್ನೊಬ್ಬಳು ಕೂಡ ಆಟೋ ಹತ್ತಲು ಪ್ರಯತ್ನಿಸುತ್ತಿದ್ದುದು ಕಂಡುಬಂದಿತ್ತು. ಹಣ ಕೊಡುವುದಿಲ್ಲ ಎಂದ ಮೇಲೂ ಅವರನ್ನು ಪೀಡಿಸಿದ್ದಾರೆ.

ಮತ್ತಷ್ಟು ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈಗಾಗಲೇ ಮಿಲಿಯನ್‌ಗೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಈ ಬಾಲಕಿಯರು ಈ ರೀತಿ ನಡೆದುಕೊಳ್ಳುತ್ತಿದ್ದರೂ ಆಟೋ ಚಾಲಕ ಯಾವ ರೀತಿಯಲ್ಲೂ ಪ್ರತಿಕ್ರಿಯಿಸದಿರುವುದು ಮತ್ತಷ್ಟು ಬೇಸರದ ಸಂಗತಿಯಾಗಿದೆ.

ಆನ್​ಲೈನ್​ನಲ್ಲಿ ಇಂತಹ ಸಾಕಷ್ಟು ವಿಡಿಯೋಗಳು ಹರಿದಾಡುತ್ತಿವೆ, ಕಳೆದ ವರ್ಷ ಯೂಟ್ಯೂಬ್​ನಲ್ಲಿ ಅಪ್​ಲೋಡ್​ ಮಾಡಲಾಗಿದ್ದ ವಿಡಿಯೋವೊಂದರಲ್ಲಿ ರಸ್ತೆಯಲ್ಲಿ ನಿಂತಿದ್ದ ವಿದೇಶಿ ಪ್ರವಾಸಿಗನ ಬಳಿಕ ಭಿಕ್ಷುಕರು ಹಣಕ್ಕಾಗಿ ಅವರನ್ನು ಪೀಡಿಸಿ ಓಡಿಸಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿತ್ತು.

ದೆಹಲಿಯ ಬೀದಿಗಳಲ್ಲಿ ಸೂರಿಲ್ಲದ , ಬೀದಿ ಬದಿಯಲ್ಲಿ ವಾಸಿಸುವ ಸುಮಾರು 70,000 ಮಕ್ಕಳಿದ್ದಾರೆ, ಅವರಲ್ಲಿ ಅರ್ಧಕ್ಕಿಂತ ಹೆಚ್ಚುಮಂದಿ ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ