AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MDT23: ನಾಲ್ವರನ್ನು ಕೊಂದಿದ್ದ ನರಭಕ್ಷಕ ಹುಲಿ ಜೀವಂತ ಸೆರೆ; ನಿಟ್ಟುಸಿರು ಬಿಟ್ಟ ನೀಲಗಿರಿ ಜನ

ಹುಲಿಯ ಹತ್ಯೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ನೀಡಿದ್ದರು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಕೊನೆಗೆ ಜೀವಂತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.

MDT23: ನಾಲ್ವರನ್ನು ಕೊಂದಿದ್ದ ನರಭಕ್ಷಕ ಹುಲಿ ಜೀವಂತ ಸೆರೆ; ನಿಟ್ಟುಸಿರು ಬಿಟ್ಟ ನೀಲಗಿರಿ ಜನ
ಹುಲಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Oct 15, 2021 | 3:48 PM

Share

ಚೆನ್ನೈ: ತಮಿಳುನಾಡಿನ ನೀಲಗಿರಿ ಜಿಲ್ಲೆಯ ನರಹಂತಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ, ಎಸ್.ಟಿ.ಎಫ್‌. ನಿಂದ 22 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಹುಲಿ ಸೆರೆ ಹಿಡಿಯಲಾಗಿದೆ. ಇದುವರೆಗೂ ನಾಲ್ವರನ್ನು ಹತ್ಯೆ ಮಾಡಿರುವ MDT-23 ಹುಲಿ‌ ಸೆರೆಯಾಗಿದೆ. ಭಾರೀ ಆತಂಕ ಸೃಷ್ಟಿಸಿದ್ದ ಎಮ್​ಡಿಟಿ-23 ಹುಲಿ ಕೊನೆಗೂ ಜೀವಂತ ಸೆರೆ ಸಿಕ್ಕಿದೆ. ಇದರಿಂದ ನೀಲಗಿರಿ ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಹುಲಿಯ ಹತ್ಯೆಗೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ನೀಡಿದ್ದರು. ಆದರೆ ಹೈಕೋರ್ಟ್ ಹುಲಿ ಕೊಲ್ಲಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿತ್ತು. ಇದೀಗ ಕೊನೆಗೆ ಜೀವಂತವಾಗಿ ಹುಲಿಯನ್ನು ಸೆರೆ ಹಿಡಿಯಲಾಗಿದೆ. ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ನರಭಕ್ಷಕ ಹುಲಿಯ ಕಾಟ ಮಿತಿಮೀರಿತ್ತು. ಕಳೆದ ಕೆಲ ದಿನಗಳಿಂದ ನಾಲ್ವರು ವ್ಯಕ್ತಿಗಳನ್ನು ಹುಲಿ ಕೊಂದು ಹಾಕಿತ್ತು. 20 ಜಾನುವಾರುಗಳನ್ನು ತಿಂದು ಹಾಕಿತ್ತು. ಇದರಿಂದಾಗಿ ತಮಿಳುನಾಡಿನ ಪ್ರಧಾನ ಮುಖ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ವಾರ್ಡನ್ ಈ ನರಭಕ್ಷಕ ಹುಲಿಯನ್ನು ಬೇಟೆಯಾಡಿ ಕೊಲ್ಲಲು ಆದೇಶ ಹೊರಡಿಸಿದ್ದರು. ಆದರೂ, ಅರಣ್ಯ ಇಲಾಖೆಯ ಅಧಿಕಾರಿಗಳು ಸಂಯಮದಿಂದ ಹುಲಿ ಸೆರೆಗೆ ಆದ್ಯತೆ ನೀಡಿ ಕಾರ್ಯಾಚರಣೆ ನಡೆಸಿದ್ದರು.

ನರಭಕ್ಷಕ ಹುಲಿಗೆ MDT-23 ಎಂದು ಹೆಸರಿಡಲಾಗಿತ್ತು. ಹುಲಿ ಬೇಟೆಯ ಸಂಪೂರ್ಣ ಅಪರೇಷನ್ ಅನ್ನು ವಿಡಿಯೋ ರೆಕಾರ್ಡ್ ಮತ್ತು ಪೋಟೋಗ್ರಾಫ್​ನಲ್ಲಿ ರೆಕಾರ್ಡ್ ಮಾಡಬೇಕು. ಅಪರೇಷನ್ ಮುಗಿದ ಬಳಿಕ ಅವರ ವಿಸ್ತೃತ ವರದಿಯನ್ನು ತಮಗೆ ಸಲ್ಲಿಸಬೇಕೆಂದು ಪ್ರಧಾನ ಮುಖ್ಯ ಅರಣ್ಯ, ವನ್ಯಜೀವಿ ಸಂರಕ್ಷಣೆಯ ವಾರ್ಡನ್ ಶೇಖರ್ ಕುಮಾರ್ ನೀರಜ್ ಆದೇಶ ಹೊರಡಿಸಿದ್ದರು.

ಟಿ23 ಹುಲಿಯನ್ನು ಅನಸ್ತೇಶಿಯಾ ಬಳಸಿ ಮಯಾರ್ ರಸ್ತೆಯ ಬಳಿ ಜೀವಂತವಾಗಿ ಸೆರೆಹಿಡಿಯಲಾಗಿದೆ ಎಂದು ಈ ಕೆಳಗಿನ ಟ್ವೀಟ್​ನಲ್ಲಿ ಬರೆಯಲಾಗಿದೆ.

ತಮಿಳುನಾಡು ಅರಣ್ಯ ಇಲಾಖೆಯ ಅಧಿಕಾರಿಗಳ ಮನವಿ ಮೇರೆಗೆ ಕೇರಳ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಹುಲಿ ಬೇಟೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ತಮಿಳುನಾಡಿನ ಈರೋಡ್ ಜಿಲ್ಲೆಯ ಅರಣ್ಯಾಧಿಕಾರಿಗಳು ಕೂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಆದರೆ, ಹುಲಿಯನ್ನು ಸೆರೆ ಹಿಡಿಯಲು ಮಾತ್ರ ಸಾಧ್ಯವಾಗಿಲ್ಲ. ದೇವನ್ ಎಸ್ಟೇಟ್​ ನಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಇದೆ. ದಟ್ಟವಾದ ಕಾಫಿ ಎಸ್ಟೇಟ್​ನ ಗಿಡ ಮರಗಳು, ಬೆಟ್ಟಗುಡ್ಡಗಳ ಭೂಪ್ರದೇಶ, ಸ್ಥಳೀಯರಿಂದ ಎದುರಾಗುತ್ತಿರುವ ಅಡ್ಡಿಗಳಿಂದ ಹುಲಿಯನ್ನು ಸೆರೆ ಹಿಡಿಸಲು ಸಾಧ್ಯವಾಗುತ್ತಿಲ್ಲ ಎಂದು ಶೇಖರ್ ಕುಮಾರ್ ನೀರಜ್ ತಮ್ಮ ಆದೇಶದಲ್ಲಿ ಹೇಳಿದ್ದರು.

ಇದನ್ನೂ ಓದಿ: ನಾಲ್ಕು ವ್ಯಕ್ತಿಗಳು, 20 ಜಾನುವಾರುಗಳನ್ನು ಕೊಂದ ನರಭಕ್ಷಕ ಹುಲಿಯ ಬೇಟೆಗೆ ಅರಣ್ಯ ಇಲಾಖೆ ಆದೇಶ

ಇದನ್ನೂ ಓದಿ: ಬಂಡಿಪುರ ಅರಣ್ಯದಲ್ಲಿ ಹುಲಿ ಕಳೆಬರ ಪತ್ತೆ: ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

Published On - 3:36 pm, Fri, 15 October 21

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?