AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.