AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ