AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ