AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ