AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ