AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?