AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಪಿ ನಡ್ಡಾ, ಅಣ್ಣಾಮಲೈ ಸಮ್ಮುಖದಲ್ಲಿ ಎಐಎಡಿಎಂಕೆ ಮಾಜಿ ನಾಯಕರು ಬಿಜೆಪಿಗೆ ಸೇರ್ಪಡೆ

ಎಐಎಡಿಎಂಕೆಯ ಮಾಜಿ ನಾಯಕರು ಬುಧವಾರ ನವದೆಹಲಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ಬಿಜೆಪಿಗೆ ಸೇರ್ಪಡೆಯಾದ ಮಾಜಿ ಎಐಎಡಿಎಂಕೆ ನಾಯಕರಲ್ಲಿ ಕೆ ವಡಿವೇಲ್, ಎಂವಿ ರತ್ನಂ, ಆರ್ ಚಿನ್ನಸ್ವಾಮಿ ಮತ್ತು ಪಿ ಎಸ್ ಕಂದಸಾಮಿ ಸೇರಿದ್ದಾರೆ. ಈ ನಾಯಕರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

ಜೆಪಿ ನಡ್ಡಾ, ಅಣ್ಣಾಮಲೈ ಸಮ್ಮುಖದಲ್ಲಿ ಎಐಎಡಿಎಂಕೆ ಮಾಜಿ ನಾಯಕರು ಬಿಜೆಪಿಗೆ ಸೇರ್ಪಡೆ
ಬಿಜೆಪಿ
ನಯನಾ ರಾಜೀವ್
|

Updated on: Feb 07, 2024 | 1:03 PM

Share

ಎಐಎಡಿಎಂಕೆ(AIADMK) ಜತೆಗಿನ ಸಂಬಂಧ ಕಡಿದುಕೊಂಡ ಬಳಿಕ ಮುಂಬರುವ ಲೋಕಸಭೆ ಚುನಾವಣೆ(Lok Sabha Election)ಗೆ ತಮಿಳುನಾಡಿನಲ್ಲಿ ತೃತೀಯ ರಂಗ ರಚನೆಗೆ ತೀವ್ರ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಇತರ ಪಕ್ಷಗಳ ನಾಯಕರನ್ನೂ ಸೇರಿಸಿ ಪಕ್ಷದ ನೆಲೆಯನ್ನು ವಿಸ್ತರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡು ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಶಾಸಕರು ಸೇರಿದಂತೆ ಎಐಎಡಿಎಂಕೆ ಪಾಳೆಯದ ನಾಯಕರ ಗುಂಪು ಬಿಜೆಪಿಗೆ ಸೇರ್ಪಡೆಗೊಂಡಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಪಕ್ಷದ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರೊಂದಿಗೆ ನಿನ್ನೆ ಸಂಜೆ ರಾಷ್ಟ್ರ ರಾಜಧಾನಿಗೆ ಆಗಮಿಸಿದ ನಾಯಕರ ಸಂಪೂರ್ಣಪಟ್ಟಿ ಇಲ್ಲಿದೆ. ಕೆ ವಡಿವೇಲ್ ಮಾಜಿ ಶಾಸಕ – ಕರೂರ್

ಪಿ.ಎಸ್.ಕಂದಸಾಮಿ- ಅರವಕುರಿಚಿ

ವಲಂಗೈಮಾನ್‌ನ ಎಐಎಡಿಎಂಕೆ ಮಾಜಿ ಸಚಿವ ಗೋಮತಿ ಶ್ರೀನಿವಾಸನ್

ಕೊಯಮತ್ತೂರಿನ ಸಿಂಗಾನಲ್ಲೂರಿನ ಆರ್ ಚಿನ್ನಸಾಮಿ

ಕೊಯಮತ್ತೂರಿನಿಂದ ಆರ್ ದುರೈಸಾಮಿ ಮೈತ್ರಿಕೂಟದ ಚಾಲೆಂಜರ್ ದುರೈ (ಎಐಎಡಿಎಂಕೆ ಮಾಜಿ ಶಾಸಕ)

ಎಂವಿ ರತ್ನಂ – ಪೊಲ್ಲಾಚಿ

ಎಸ್ ಎಂ ವಾಸನ್ – ವೇದಚಂದೂರು

ಎಸ್ ಮುತ್ತುಕೃಷ್ಣನ್ – ಕನ್ನಿಯಾಕುಮಾರಿ

ಭುವನಗಿರಿಯಿಂದ ಪಿಎಸ್ ಅರುಲ್

ಕುರಿಜಿಪಾಡಿಯಿಂದ ಆರ್ ರಾಜೇಂದ್ರನ್

ಎ ಪ್ರಭು – ಕಲ್ಲಕುರಿಚಿ ಮತ್ತು ತೇಣಿಯಿಂದ ವಿ.ಆರ್.ಜಯರಾಮನ್

ಕೆ ಬಾಲಸುಬ್ರಮಣ್ಯಂ ಸೀರ್ಕಾಜಿ

ಎ ಚಂದ್ರಶೇಖರನ್ – ಚೋಜಾವಂದನ್

ಕೆ ಆರ್ ತಂಗರಸು ಅಂಡಿಮಾಡಂ (ಕಾಂಗ್ರೆಸ್ ಪಕ್ಷದಿಂದ)

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಎಐಎಡಿಎಂಕೆ ನಾಯಕರನ್ನು ಪಕ್ಷಕ್ಕೆ ಕರೆತರುವ ಮೂಲಕ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.

ಮತ್ತಷ್ಟು ಓದಿ: ನಮಗೆ ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡಬೇಡಿ: ಎಂಕೆ ಸ್ಟಾಲಿನ್​​​ಗೆ ಬಿಜೆಪಿ ನಾಯಕ ಅಣ್ಣಾಮಲೈ ತಿರುಗೇಟು

ಡಿಎಂಕೆ ತಂಡದಲ್ಲಿ ಕಾಂಗ್ರೆಸ್, ಎಡಪಂಥೀಯರು ಹಲವರಿದ್ದಾರೆ. ಎಸ್‌ಟಿಬಿಐ ಸೇರಿದಂತೆ ಸಣ್ಣ ಪಕ್ಷಗಳು ಎಐಎಡಿಎಂಕೆ ತಂಡವನ್ನು ಸೇರಿಕೊಂಡಿವೆ.

AAMUK ಬಿಜೆಪಿಯೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ. ಬಮಕ ಸೇರಿದಂತೆ ಹೊಸ ಪಕ್ಷಗಳು ಯಾವುದೇ ನಿಲುವು ತಳೆದಂತಿಲ್ಲ, ನಾಮ್ ತಮಿಳರ್ ಪಕ್ಷ ಎಂದಿನಂತೆ ಏಕಾಂಗಿಯಾಗಿ ಸ್ಫರ್ದಿಸುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದಲ್ಲಿ ಎಐಎಡಿಎಂಕೆ ಕೂಡ ಭಾಗವಾಗಿತ್ತು.

ಮೋದಿ ಭೇಟಿ: ಪ್ರಧಾನಿ ಮೋದಿ ಇದೇ 25ರಂದು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಪಲ್ಲಡಂನಲ್ಲಿ ನಡೆಯುತ್ತಿರುವ ಮಹಾ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿ ಭಾಗವಹಿಸಿದ್ದಾರೆ. ಪ್ರಧಾನಿ ಮೋದಿಯವರ ಭೇಟಿಯ ವೇಳೆ ಇನ್ನೂ ಕೆಲವು ಪ್ರಮುಖ ರಾಜಕೀಯ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಅಣ್ಣಾಮಲೈ ಯೋಜಿಸಿದ್ದಾರೆ. ತಮಿಳುನಾಡಿನಲ್ಲಿ ಪರ್ಯಾಯ ಪಕ್ಷಗಳನ್ನು ಬಗ್ಗುಬಡಿಯಲು ಬಿಜೆಪಿ ನಿಜವಾಗಿಯೂ ಆಪರೇಷನ್ ತಾಮರೈ ಜಾರಿಗೆ ಮುಂದಾಗಿದೆ ಎಂಬುದಕ್ಕೆ ಇಂತಹ ಕ್ರಮಗಳು ಬೆಳಕು ಚೆಲ್ಲುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!