AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ಗೆ ‘ಕೈ’ ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅಸ್ಸಾಂ ಮಾಜಿ ಕಾಂಗ್ರೆಸ್ ಅಧ್ಯಕ್ಷ ಭೂಪೇನ್ ಬೋರಾ ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಹೇಳಿದ್ದರು. ಅವರ ರಾಜೀನಾಮೆಯನ್ನು ಹೈಕಮಾಂಡ್ ಸ್ವೀಕರಿಸಿರಲಿಲ್ಲ. ಈ ನಿರ್ಧಾರ ಬದಲಾಯಿಸುವಂತೆ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಮನವೊಲಿಕೆಗೆ ಮುಂದಾಗಿದ್ದರು. ಆದರೆ, ಕೊನೆಗೂ ಕಾಂಗ್ರೆಸ್ ತೊರೆಯುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿರುವ ಭೂಪೇನ್ ಬೋರಾ ಸಿಎಂ ಹಿಮಂತ ಶರ್ಮಾ ಅವರನ್ನು ಭೇಟಿಯಾಗಿದ್ದು, ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ.

ಕಾಂಗ್ರೆಸ್​​ಗೆ 'ಕೈ' ಕೊಟ್ಟ ಭೂಪೇನ್ ಬೋರಾ ಬಿಜೆಪಿ ತೆಕ್ಕೆಗೆ; ಫೆ. 22ಕ್ಕೆ ಅಧಿಕೃತ ಸೇರ್ಪಡೆ
Himanta Biswa Sarma With Bhupen Borah
ಸುಷ್ಮಾ ಚಕ್ರೆ
|

Updated on: Feb 17, 2026 | 9:28 PM

Share

ನವದೆಹಲಿ, ಫೆಬ್ರವರಿ 17: ಅಸ್ಸಾಂ ರಾಜ್ಯದ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಬೋರಾ (Bhupen Borah) ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಹೇಳಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಹಿಮಂತ ಶರ್ಮಾ, ಭೂಪೇನ್ ಬೋರಾ ಫೆಬ್ರವರಿ 22ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಅವರೊಂದಿಗೆ, ಗುವಾಹಟಿ ಮತ್ತು ಉತ್ತರ ಲಖಿಂಪುರದಲ್ಲಿ ಹಲವು ಕಾಂಗ್ರೆಸ್ ನಾಯಕರು ಕೂಡ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದಿದ್ದಾರೆ.”

“ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಲಿದ್ದಾರೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಈಗಾಗಲೇ ಭೂಪೇನ್ ಬೋರಾ ಅವರ ಸೇರ್ಪಡೆಯನ್ನು ಅನುಮೋದಿಸಿದ್ದಾರೆ. ನಮ್ಮ ಪಕ್ಷದಲ್ಲಿ ಭೂಪೇನ್ ಬೋರಾ ಅವರಿಗೆ ಎಲ್ಲಾ ಗೌರವ ಮತ್ತು ಘನತೆಯನ್ನು ನೀಡಲಾಗುವುದು. ಭೂಪೇನ್ ಬೋರಾ ಕಾಂಗ್ರೆಸ್‌ನಲ್ಲಿ ದೀರ್ಘಕಾಲದಿಂದ ಕಷ್ಟಪಟ್ಟಿದ್ದಾರೆ. ಈಗ ಅವರು ಬಯಸಿದ್ದನ್ನು ಮಾಡಲು ಬಿಜೆಪಿಯಲ್ಲಿ ಅವರಿಗೆ ವೇದಿಕೆ ಸಿಗಲಿದೆ” ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ನಿರ್ಧಾರ ಬದಲಿಸಿದ ಭೂಪೇನ್ ಬೋರಾ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ, ಗುವಾಹಟಿಯ ಘೋರಾಮರ ಪ್ರದೇಶದಲ್ಲಿರುವ ಭೂಪೇನ್ ಬೋರಾ ಅವರ ನಿವಾಸಕ್ಕೆ ಸಿಎಂ ಹಿಮಂತ ಬಿಸ್ವ ಶರ್ಮಾ ಭೇಟಿ ನೀಡಿದರು. ಈ ಭೇಟಿಯ ಸಮಯದಲ್ಲಿ ಬೋರಾ ಅವರ ಪತ್ನಿ ಮತ್ತು ಮಗ ಮುಖ್ಯಮಂತ್ರಿಗೆ ಆರತಿ ಮಾಡಿ ಸ್ವಾಗತಿಸಿದರು. ಭೂಪೇನ್ ಬೋರಾ ಸೋಮವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು.

ಆದರೆ ಪಕ್ಷದ ಹೈಕಮಾಂಡ್ ಅವರ ರಾಜೀನಾಮೆಯನ್ನು ಸ್ವೀಕರಿಸಲಿಲ್ಲ. ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಮನವೊಲಿಸಲು ಪ್ರಯತ್ನಿಸಿತು. ಇದರ ನಂತರ, ಅವರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸಲು ಸಮಯ ಕೋರಿದ್ದರು. ಆದರೆ, ಅವರು ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಬದಲಾಯಿಸಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ