AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್

ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್
ಲಾಲೂ ಪ್ರಸಾದ್ ಯಾದವ್
TV9 Web
| Edited By: |

Updated on:Jul 07, 2022 | 12:44 PM

Share

ಪಟನಾ: ಬಿಹಾರದ (Bihar) ಮಾಜಿ ಸಿಎಂ, ರಾಷ್ಟ್ರೀಯ ಜನತಾ ದಳ(RJD) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಬುಧವಾರ ರಾತ್ರಿ ಏರ್ ಲಿಫ್ಟ್ ಮಾಡಿ ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ. ಪಟನಾದಲ್ಲಿರುವ ತಮ್ಮ ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದು ಲಾಲೂ ಅವರ ಮೂಳೆ ಮುರಿದಿದ್ದು ಚಿಕಿತ್ಸೆ ಮುಂದುವರಿದಿದೆ. ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಕಿಡ್ನಿ ಕಸಿಗಾಗಿ ಅವರನ್ನು ಸಿಂಗಾಪುರ್​​ಗೆ ಕರೆದುಕೊಂಡುವ ಯೋಜನೆ ಇತ್ತು. ಆದರೆ ಈಗ ಮೂಳೆ ಮುರಿತ ಸಂಭವಿಸಿರುವುದರಿಂದ ದೆಹಲಿಯ ವೈದ್ಯರ ಸಲಹೆಯನ್ನು ನಾವು ಪಾಲಿಸುತ್ತೇವೆ. ಅವರು ಸಮ್ಮತಿಸಿದರೆ ನಾವು ವಿದೇಶಕ್ಕೆ ಕರೆದುಕೊಂಡು ಹೋಗುತ್ತೇವೆ ಎಂದು ತೇಜಸ್ವಿ ಹೇಳಿದ್ದಾರೆ.

ಏತನ್ಮಧ್ಯೆ, ಲಾಲೂ ಅವರ ಪತ್ನಿ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರು ಬುಧವಾರ ದೆಹಲಿಗೆ ತಲುಪಿದ್ದು, ಅವರ ಆರೋಗ್ಯ ಈಗ ಸ್ವಲ್ಪ ಸುಧಾರಿಸಿದೆ ಎಂದು ಹೇಳಿದ್ದಾರೆ.ಚಿಂತಿಸ ಬೇಡಿ, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರು ಗುಣಮುಖವಾಗುತ್ತಾರೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿ ಎಂದು ರಾಬ್ರಿ ಹೇಳಿದ್ದಾರೆ.

ಲಾಲೂ ಭೇಟಿ ಮಾಡಿದ ನಿತೀಶ್ ಕುಮಾರ್

ದೆಹಲಿ ಏಮ್ಸ್ ಗೆ ಲಾಲೂ ಅವರನ್ನು ಶಿಫ್ಟ್ ಮಾಡುವ ಮುನ್ನ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಲಾಲೂ ಅವರನ್ನು ಭೇಟಿ ಮಾಡಿದ್ದಾರೆ. ನಿತೀಶ್ ಅವರ ವೈದ್ಯರಲ್ಲಿ ಮಾತನಾಡಿದ್ದು, ಲಾಲೂ ಪುತ್ರರಾದ ತೇಜಸ್ವಿ ಮತ್ತು ತೇಜಸ್ವಿ ಪ್ರತಾಪ್ ಅವರನ್ನೂ ಭೇಟಿ ಮಾಡಿದ್ದಾರೆ.  ಆಸ್ಪತ್ರೆಗೆ ದಾಖಲಾದ ನಂತರ ಲಾಲೂ ಅವರ ಆರೋಗ್ಯ ಸುಧಾರಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯುವುದು ಉತ್ತಮ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ನಿತೀಶ್ ಹೇಳಿದ್ದಾರೆ.

Published On - 12:33 pm, Thu, 7 July 22

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!