AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್

ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್
ಲಾಲೂ ಪ್ರಸಾದ್ ಯಾದವ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 07, 2022 | 12:44 PM

ಪಟನಾ: ಬಿಹಾರದ (Bihar) ಮಾಜಿ ಸಿಎಂ, ರಾಷ್ಟ್ರೀಯ ಜನತಾ ದಳ(RJD) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಬುಧವಾರ ರಾತ್ರಿ ಏರ್ ಲಿಫ್ಟ್ ಮಾಡಿ ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ. ಪಟನಾದಲ್ಲಿರುವ ತಮ್ಮ ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದು ಲಾಲೂ ಅವರ ಮೂಳೆ ಮುರಿದಿದ್ದು ಚಿಕಿತ್ಸೆ ಮುಂದುವರಿದಿದೆ. ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಕಿಡ್ನಿ ಕಸಿಗಾಗಿ ಅವರನ್ನು ಸಿಂಗಾಪುರ್​​ಗೆ ಕರೆದುಕೊಂಡುವ ಯೋಜನೆ ಇತ್ತು. ಆದರೆ ಈಗ ಮೂಳೆ ಮುರಿತ ಸಂಭವಿಸಿರುವುದರಿಂದ ದೆಹಲಿಯ ವೈದ್ಯರ ಸಲಹೆಯನ್ನು ನಾವು ಪಾಲಿಸುತ್ತೇವೆ. ಅವರು ಸಮ್ಮತಿಸಿದರೆ ನಾವು ವಿದೇಶಕ್ಕೆ ಕರೆದುಕೊಂಡು ಹೋಗುತ್ತೇವೆ ಎಂದು ತೇಜಸ್ವಿ ಹೇಳಿದ್ದಾರೆ.

ಏತನ್ಮಧ್ಯೆ, ಲಾಲೂ ಅವರ ಪತ್ನಿ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರು ಬುಧವಾರ ದೆಹಲಿಗೆ ತಲುಪಿದ್ದು, ಅವರ ಆರೋಗ್ಯ ಈಗ ಸ್ವಲ್ಪ ಸುಧಾರಿಸಿದೆ ಎಂದು ಹೇಳಿದ್ದಾರೆ.ಚಿಂತಿಸ ಬೇಡಿ, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರು ಗುಣಮುಖವಾಗುತ್ತಾರೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿ ಎಂದು ರಾಬ್ರಿ ಹೇಳಿದ್ದಾರೆ.

ಲಾಲೂ ಭೇಟಿ ಮಾಡಿದ ನಿತೀಶ್ ಕುಮಾರ್

ದೆಹಲಿ ಏಮ್ಸ್ ಗೆ ಲಾಲೂ ಅವರನ್ನು ಶಿಫ್ಟ್ ಮಾಡುವ ಮುನ್ನ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಲಾಲೂ ಅವರನ್ನು ಭೇಟಿ ಮಾಡಿದ್ದಾರೆ. ನಿತೀಶ್ ಅವರ ವೈದ್ಯರಲ್ಲಿ ಮಾತನಾಡಿದ್ದು, ಲಾಲೂ ಪುತ್ರರಾದ ತೇಜಸ್ವಿ ಮತ್ತು ತೇಜಸ್ವಿ ಪ್ರತಾಪ್ ಅವರನ್ನೂ ಭೇಟಿ ಮಾಡಿದ್ದಾರೆ.  ಆಸ್ಪತ್ರೆಗೆ ದಾಖಲಾದ ನಂತರ ಲಾಲೂ ಅವರ ಆರೋಗ್ಯ ಸುಧಾರಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯುವುದು ಉತ್ತಮ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ನಿತೀಶ್ ಹೇಳಿದ್ದಾರೆ.

Published On - 12:33 pm, Thu, 7 July 22

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!