AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಟ್ರಾಕ್ಟ್​ ಕಿಲ್ಲರ್​ ಮೂಲಕ ಹೆತ್ತ ಮಗಳನ್ನೇ ಕೊಲ್ಲಲು ಪ್ಲಾನ್; ಮಾಜಿ ಶಾಸಕನ ಬಂಧನ

ಮರ್ಯಾದಾ ಹತ್ಯೆಗಾಗಿ ಕಾಂಟ್ರಾಕ್ಟ್​ ಕಿಲ್ಲರ್​ಗೆ 20 ಲಕ್ಷ ರೂ.ಗಳನ್ನು ನೀಡಲಾಗಿತ್ತು. ಆದರೆ, ಕೊಲೆ ಮಾಡಲು ಹೋಗಿದ್ದ ಆರೋಪಿಗಳು ಈ ವಿಷಯವನ್ನು ಬಾಯಿಬಿಟ್ಟಿದ್ದರಿಂದ ಸುರೇಂದ್ರ ಶರ್ಮಾ ಅವರನ್ನು ಬಂಧಿಸಲಾಗಿದೆ.

ಕಾಂಟ್ರಾಕ್ಟ್​ ಕಿಲ್ಲರ್​ ಮೂಲಕ ಹೆತ್ತ ಮಗಳನ್ನೇ ಕೊಲ್ಲಲು ಪ್ಲಾನ್; ಮಾಜಿ ಶಾಸಕನ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jul 05, 2022 | 10:17 AM

Share

ಬಿಹಾರ: ಬಿಹಾರದ ಮಾಜಿ ಶಾಸಕ ಸುರೇಂದ್ರ ಶರ್ಮಾ ತನ್ನ ಸ್ವಂತ ಮಗಳನ್ನು ಕೊಲ್ಲಲು ಕಾಂಟ್ರಾಕ್ಟ್​ ಕಿಲ್ಲರ್​ನನ್ನು (Contract Killer) ನೇಮಿಸಿದ್ದಕ್ಕಾಗಿ ಇದೀಗ ಜೈಲು ಸೇರಿದ್ದಾರೆ. ತನ್ನ ಮಗಳು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ಅವರು ಕೋಪಗೊಂಡಿದ್ದರು. ಇದೇ ಕಾರಣಕ್ಕೆ ಮಗಳನ್ನು ಕೊಲೆ (Murder) ಮಾಡಲು ಬಾಡಿಗೆ ಹಂತಕನನ್ನು ನೇಮಕ ಮಾಡಿದ್ದರು. ಈ ವಿಷಯ ಇದೀಗ ಬಯಲಾಗಿದ್ದು, ಅವರನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಮರ್ಯಾದಾ ಹತ್ಯೆಗಾಗಿ ಕಾಂಟ್ರಾಕ್ಟ್​ ಕಿಲ್ಲರ್​ಗೆ 20 ಲಕ್ಷ ರೂ.ಗಳನ್ನು ನೀಡಲಾಗಿತ್ತು. ಆದರೆ, ಕೊಲೆ ಮಾಡಲು ಹೋಗಿದ್ದ ಆರೋಪಿಗಳು ಈ ವಿಷಯವನ್ನು ಬಾಯಿಬಿಟ್ಟಿದ್ದರಿಂದ ಸುರೇಂದ್ರ ಶರ್ಮಾ ಅವರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ನಗರ (ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಜುಲೈ 1 ಮತ್ತು 2ರ ಮಧ್ಯರಾತ್ರಿ ಸುರೇಂದ್ರ ಶರ್ಮಾ ಅವರ ಮಗಳ ಮೇಲೆ ಕೊಲೆ ಯತ್ನ ನಡೆದಿತ್ತು. ಶ್ರೀ ಕೃಷ್ಣಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ಆ ಯುವತಿ ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಗುಂಡು ಹಾರಿಸಿದ ಆರೋಪಿಗಳು ಬೈಕ್​ನಲ್ಲಿ ವೇಗವಾಗಿ ಹೋಗಿದ್ದಾರೆ.

ಇದನ್ನೂ ಓದಿ: ಮಂಗಳಮುಖಿ ಕೊಲೆ ಪ್ರಕರಣ; 3 ವರ್ಷ ಕಳೆದರೂ ಪತ್ತೆಯಾಗದ ಮತ್ತೋರ್ವ ಮಂಗಳಮುಖಿ, ಮರ್ಯಾದಾ ಹತ್ಯೆ ನಡೆದಿರುವ ಶಂಕೆ

ಅವರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಮಾಜಿ ಶಾಸಕರ ಮಗಳನ್ನು ಕೊಲ್ಲಲು ಬಾಡಿಗೆ ಪಡೆದಿದ್ದ ಗ್ಯಾಂಗ್ ಬಳಿಯಿಂದ 3 ಪಿಸ್ತೂಲ್‌ಗಳು, ಮದ್ದುಗುಂಡುಗಳು ಮತ್ತು ನಂಬರ್ ಪ್ಲೇಟ್ ಇಲ್ಲದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಬಾಡಿಗೆ ಹಂತಕರ ತಂಡದ ನಾಯಕ ಅಭಿಷೇಕ್‌ನನ್ನು ಬಂಧಿಸಲಾಗಿದ್ದು, ಆತನ ಇತರ ಇಬ್ಬರು ಸಹಚರರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸುರೇಂದ್ರ ಶರ್ಮಾ ಈ ಹಿಂದೆ ಸ್ವತಂತ್ರವಾಗಿ ಸ್ಪರ್ಧಿಸಿದ್ದರು. ಇದುವರೆಗೆ ಯಾವುದೇ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ. ಅಭಿಷೇಕ್ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಸುರೇಂದ್ರ ಶರ್ಮಾ 1990ರ ದಶಕದಲ್ಲಿ ಸರನ್ ಜಿಲ್ಲೆಯಿಂದ ಶಾಸಕಾಂಗ ಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ