AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ

ರಂಜಿತ್​ ಸಿನ್ಹಾ ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ
ರಂಜಿತ್ ಸಿನ್ಹಾ
Follow us
Lakshmi Hegde
|

Updated on:Apr 16, 2021 | 2:26 PM

ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ (68) ಕೊವಿಡ್​-19 ಸೋಂಕಿನಿಂದ ಇಂದು ಮುಂಜಾನೆ ದೆಹಲಿಯಲ್ಲಿ ನಿಧನರಾದರು. ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಇರುವುದು ನಿನ್ನೆ ರಾತ್ರಿಯಷ್ಟೇ ದೃಢಪಟ್ಟಿತ್ತು. ಮೂಲತಃ ಬಿಹಾರದವರಾದ ಸಿನ್ಹಾ, 1974ನೇ ಇಸ್ವಿಯ ಐಪಿಎಸ್​ ಬ್ಯಾಚ್​​ನವರಾಗಿದ್ದಾರೆ.

ರಂಜಿತ್​ ಸಿನ್ಹಾ ತಮ್ಮ 40ವರ್ಷಗಳ ವೃತ್ತಿ ಜೀವನದಲ್ಲಿ ರಾಂಚಿ, ಮಧುಬಾನಿ ಮತ್ತು ಸಹರ್ಸಾದ ಎಸ್​​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೇ ಹಲವು ವಿವಾದಗಳಿಗೂ ಸಿಲುಕಿದ್ದರು. ಇನ್ನು ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ. 2000ನೇ ಇಸ್ವಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರ ಪರಿಸ್ಥಿತಿಯನ್ನು ಕೂಡ ನಿರ್ವಹಣೆ ಮಾಡಿದ್ದಾರೆ. 2005ರಲ್ಲಿ ಕಾಶ್ಮೀರಿ ವ್ಯಾಲಿಯಲ್ಲಿ ಐಜಿ (ಕಾರ್ಯಾಚರಣೆ) ಆಗಿದ್ದರು.

2012ರಲ್ಲಿ ಸಿಬಿಐನ ನಿರ್ದೇಶಕರಾಗಿ ನೇಮಕರಾದರು. ಅದಕ್ಕೂ ಮೊದಲು ರೈಲ್ವೇ ರಕ್ಷಣಾ ದಳ (ಆರ್​ಪಿಎಫ್​) ಮತ್ತು ಇಂಡೋ-ಟಿಬೇಟಿಯನ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​

ಮಕ್ಕಳನ್ನು ತಬ್ಬಲಿ ಮಾಡಿ ಇಹಲೋಕ ತ್ಯಜಿಸಿದ ದಂಪತಿ; ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

Published On - 2:25 pm, Fri, 16 April 21

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು