AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ

ರಂಜಿತ್​ ಸಿನ್ಹಾ ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ
ರಂಜಿತ್ ಸಿನ್ಹಾ
Lakshmi Hegde
|

Updated on:Apr 16, 2021 | 2:26 PM

Share

ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ (68) ಕೊವಿಡ್​-19 ಸೋಂಕಿನಿಂದ ಇಂದು ಮುಂಜಾನೆ ದೆಹಲಿಯಲ್ಲಿ ನಿಧನರಾದರು. ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಇರುವುದು ನಿನ್ನೆ ರಾತ್ರಿಯಷ್ಟೇ ದೃಢಪಟ್ಟಿತ್ತು. ಮೂಲತಃ ಬಿಹಾರದವರಾದ ಸಿನ್ಹಾ, 1974ನೇ ಇಸ್ವಿಯ ಐಪಿಎಸ್​ ಬ್ಯಾಚ್​​ನವರಾಗಿದ್ದಾರೆ.

ರಂಜಿತ್​ ಸಿನ್ಹಾ ತಮ್ಮ 40ವರ್ಷಗಳ ವೃತ್ತಿ ಜೀವನದಲ್ಲಿ ರಾಂಚಿ, ಮಧುಬಾನಿ ಮತ್ತು ಸಹರ್ಸಾದ ಎಸ್​​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೇ ಹಲವು ವಿವಾದಗಳಿಗೂ ಸಿಲುಕಿದ್ದರು. ಇನ್ನು ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ. 2000ನೇ ಇಸ್ವಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರ ಪರಿಸ್ಥಿತಿಯನ್ನು ಕೂಡ ನಿರ್ವಹಣೆ ಮಾಡಿದ್ದಾರೆ. 2005ರಲ್ಲಿ ಕಾಶ್ಮೀರಿ ವ್ಯಾಲಿಯಲ್ಲಿ ಐಜಿ (ಕಾರ್ಯಾಚರಣೆ) ಆಗಿದ್ದರು.

2012ರಲ್ಲಿ ಸಿಬಿಐನ ನಿರ್ದೇಶಕರಾಗಿ ನೇಮಕರಾದರು. ಅದಕ್ಕೂ ಮೊದಲು ರೈಲ್ವೇ ರಕ್ಷಣಾ ದಳ (ಆರ್​ಪಿಎಫ್​) ಮತ್ತು ಇಂಡೋ-ಟಿಬೇಟಿಯನ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​

ಮಕ್ಕಳನ್ನು ತಬ್ಬಲಿ ಮಾಡಿ ಇಹಲೋಕ ತ್ಯಜಿಸಿದ ದಂಪತಿ; ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

Published On - 2:25 pm, Fri, 16 April 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ