AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ

ರಂಜಿತ್​ ಸಿನ್ಹಾ ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ
ರಂಜಿತ್ ಸಿನ್ಹಾ
Lakshmi Hegde
|

Updated on:Apr 16, 2021 | 2:26 PM

Share

ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ (68) ಕೊವಿಡ್​-19 ಸೋಂಕಿನಿಂದ ಇಂದು ಮುಂಜಾನೆ ದೆಹಲಿಯಲ್ಲಿ ನಿಧನರಾದರು. ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಇರುವುದು ನಿನ್ನೆ ರಾತ್ರಿಯಷ್ಟೇ ದೃಢಪಟ್ಟಿತ್ತು. ಮೂಲತಃ ಬಿಹಾರದವರಾದ ಸಿನ್ಹಾ, 1974ನೇ ಇಸ್ವಿಯ ಐಪಿಎಸ್​ ಬ್ಯಾಚ್​​ನವರಾಗಿದ್ದಾರೆ.

ರಂಜಿತ್​ ಸಿನ್ಹಾ ತಮ್ಮ 40ವರ್ಷಗಳ ವೃತ್ತಿ ಜೀವನದಲ್ಲಿ ರಾಂಚಿ, ಮಧುಬಾನಿ ಮತ್ತು ಸಹರ್ಸಾದ ಎಸ್​​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೇ ಹಲವು ವಿವಾದಗಳಿಗೂ ಸಿಲುಕಿದ್ದರು. ಇನ್ನು ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ. 2000ನೇ ಇಸ್ವಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರ ಪರಿಸ್ಥಿತಿಯನ್ನು ಕೂಡ ನಿರ್ವಹಣೆ ಮಾಡಿದ್ದಾರೆ. 2005ರಲ್ಲಿ ಕಾಶ್ಮೀರಿ ವ್ಯಾಲಿಯಲ್ಲಿ ಐಜಿ (ಕಾರ್ಯಾಚರಣೆ) ಆಗಿದ್ದರು.

2012ರಲ್ಲಿ ಸಿಬಿಐನ ನಿರ್ದೇಶಕರಾಗಿ ನೇಮಕರಾದರು. ಅದಕ್ಕೂ ಮೊದಲು ರೈಲ್ವೇ ರಕ್ಷಣಾ ದಳ (ಆರ್​ಪಿಎಫ್​) ಮತ್ತು ಇಂಡೋ-ಟಿಬೇಟಿಯನ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​

ಮಕ್ಕಳನ್ನು ತಬ್ಬಲಿ ಮಾಡಿ ಇಹಲೋಕ ತ್ಯಜಿಸಿದ ದಂಪತಿ; ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

Published On - 2:25 pm, Fri, 16 April 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ