AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ

Maharashtra: ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ
ಮೋಹನ್​ ಭಾಗವತ್​ ಮತ್ತು ಎಸ್​.ಎ.ಬೊಬ್ಡೆ
TV9 Web
| Edited By: |

Updated on: Sep 01, 2021 | 2:19 PM

Share

ಮಾಜಿ ಸಿಜೆಐ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ) (Former CJI) ಎಸ್.ಎ.ಬೊಬ್ಡೆ (S.A.Bobde) ನಿನ್ನೆ (ಆಗಸ್ಟ್​ 31) ಆರ್​ಎಸ್​ಎಸ್​ ಸರಸಂಘಸಂಚಾಲಕ ಮೋಹನ್​ ಭಾಗವತ್​ (Mohan Bhagwat)ರನ್ನು ನಾಗ್ಪುರದಲ್ಲಿ ಭೇಟಿಯಾಗಿ ಸುಮಾರು 1 ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಯಲ್ಲೇ ಈ ಭೇಟಿ ನಡೆದಿದೆ ಎಂದು ನಂಬಲರ್ಹ ಮೂಲಗಳಿಂದಲೇ ತಿಳಿದುಬಂದಿದ್ದರೂ, ಆರ್​ಎಸ್​ಎಸ್​ ಮಾತ್ರ ಇದನ್ನು ನಿರಾಕರಿಸಿದೆ. ಒಂದು ತಾಸುಗಳ ಮಾತುಕತೆ ನಡೆದಿದ್ದರೂ, ಯಾವ ವಿಷಯದ ಬಗ್ಗೆ ಚರ್ಚೆ ನಡೆಯಿತು ಎಂಬುದಿನ್ನೂ ತಿಳಿದಿಲ್ಲ. ಹಾಗೇ, ಮೋಹನ್​ ಭಾಗವತ್ ಆಗಲೀ, ಎಸ್.ಎ.ಬೊಬ್ಡೆಯವರಾಗಲೀ ಈ ಬಗ್ಗೆ ಇನ್ನೂ ಮಾತನಾಡಿಲ್ಲ.

ಬೊಬ್ಡೆಯವರು ಆರ್​ಎಸ್​ಎಸ್​ ಕಚೇರಿಯನ್ನಾಗಲೀ, ಮುಖ್ಯಸ್ಥ ಮೋಹನ್​ ಭಾಗವತ್​​ ಅವರನ್ನಾಗಲಿ ಭೇಟಿಯಾಗಿದ್ದು ಇದೇ ಮೊದಲು. ಇಲ್ಲಷ್ಟೇ ಅಲ್ಲದೆ, ಮಹಲ್​ ಏರಿಯಾದಲ್ಲಿರುವ, ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ್​ ಬಲಿರಾಮ್​ ಹೆಗ್ಡೆವಾರ್ ಅವರ 100 ವರ್ಷಗಳಷ್ಟು ಹಳೆಯದಾದ ಮನೆಗೂ ಎಸ್​.ಎ.ಬೊಬ್ಡೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ​​ ಆ ಮನೆಯನ್ನು ಹೇಗೆ ನಿರ್ವಹಿಸಲಾಗುತ್ತಿದೆ..ಹೇಗೆಲ್ಲ ರಕ್ಷಿಸಲಾಗುತ್ತಿದೆ ಎಂಬುದನ್ನು ತಿಳಿಯಲು ಬೊಬ್ಡೆ ಅಲ್ಲಿಗೆ ತೆರಳಿದ್ದರು ಎನ್ನಲಾಗಿದೆ.

ಅಯೋಧ್ಯಾ ಐತಿಹಾಸಿಕ ತೀರ್ಪು ನೀಡಿದ್ದ ಬೊಬ್ಡೆ ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು. ಅವರು ನಿವೃತ್ತರಾಗುವ ಕೆಲವೇ ದಿನಗಳ ಮೊದಲು ಅಯೋಧ್ಯೆ ಐತಿಹಾಸಿಕ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇತ್ತೀಚೆಗೆ ಮಾಜಿ ಸಿಜೆಐ ಅಂದರೆ ಎಸ್.ಎ.ಬೊಬ್ಡೆಗೂ ಮುನ್ನ ಇದ್ದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇದೀಗ ಎಸ್​.ಎ.ಬೊಬ್ಡೆ ಮತ್ತು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ ಭೇಟಿ ಇದೇ ಕಾರಣಕ್ಕೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಅಪ್ಪನ ಸಾಲ ಮಗ ತೀರಿಸಬೇಕಲ್ಲ; ಯುಪಿಎ ಸರ್ಕಾರ ಮಾಡಿದ್ದನ್ನ ನಾವು ತೀರಿಸ್ತಾ ಇದೀವಿ; ಎಲ್​ಪಿಜಿ ಬೆಲೆ ಏರಿಕೆಗೆ ಸಂಗಣ್ಣ ಕರಡಿ ಉತ್ತರ

ಕೋಲಾರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ಕೇರಳದಿಂದ ಬಂದವರೇ ಸೂಪರ್​ ಸ್ಪ್ರೆಡರ್ಸ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ