AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ

Maharashtra: ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ
ಮೋಹನ್​ ಭಾಗವತ್​ ಮತ್ತು ಎಸ್​.ಎ.ಬೊಬ್ಡೆ
TV9 Web
| Edited By: |

Updated on: Sep 01, 2021 | 2:19 PM

Share

ಮಾಜಿ ಸಿಜೆಐ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ) (Former CJI) ಎಸ್.ಎ.ಬೊಬ್ಡೆ (S.A.Bobde) ನಿನ್ನೆ (ಆಗಸ್ಟ್​ 31) ಆರ್​ಎಸ್​ಎಸ್​ ಸರಸಂಘಸಂಚಾಲಕ ಮೋಹನ್​ ಭಾಗವತ್​ (Mohan Bhagwat)ರನ್ನು ನಾಗ್ಪುರದಲ್ಲಿ ಭೇಟಿಯಾಗಿ ಸುಮಾರು 1 ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಯಲ್ಲೇ ಈ ಭೇಟಿ ನಡೆದಿದೆ ಎಂದು ನಂಬಲರ್ಹ ಮೂಲಗಳಿಂದಲೇ ತಿಳಿದುಬಂದಿದ್ದರೂ, ಆರ್​ಎಸ್​ಎಸ್​ ಮಾತ್ರ ಇದನ್ನು ನಿರಾಕರಿಸಿದೆ. ಒಂದು ತಾಸುಗಳ ಮಾತುಕತೆ ನಡೆದಿದ್ದರೂ, ಯಾವ ವಿಷಯದ ಬಗ್ಗೆ ಚರ್ಚೆ ನಡೆಯಿತು ಎಂಬುದಿನ್ನೂ ತಿಳಿದಿಲ್ಲ. ಹಾಗೇ, ಮೋಹನ್​ ಭಾಗವತ್ ಆಗಲೀ, ಎಸ್.ಎ.ಬೊಬ್ಡೆಯವರಾಗಲೀ ಈ ಬಗ್ಗೆ ಇನ್ನೂ ಮಾತನಾಡಿಲ್ಲ.

ಬೊಬ್ಡೆಯವರು ಆರ್​ಎಸ್​ಎಸ್​ ಕಚೇರಿಯನ್ನಾಗಲೀ, ಮುಖ್ಯಸ್ಥ ಮೋಹನ್​ ಭಾಗವತ್​​ ಅವರನ್ನಾಗಲಿ ಭೇಟಿಯಾಗಿದ್ದು ಇದೇ ಮೊದಲು. ಇಲ್ಲಷ್ಟೇ ಅಲ್ಲದೆ, ಮಹಲ್​ ಏರಿಯಾದಲ್ಲಿರುವ, ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ್​ ಬಲಿರಾಮ್​ ಹೆಗ್ಡೆವಾರ್ ಅವರ 100 ವರ್ಷಗಳಷ್ಟು ಹಳೆಯದಾದ ಮನೆಗೂ ಎಸ್​.ಎ.ಬೊಬ್ಡೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ​​ ಆ ಮನೆಯನ್ನು ಹೇಗೆ ನಿರ್ವಹಿಸಲಾಗುತ್ತಿದೆ..ಹೇಗೆಲ್ಲ ರಕ್ಷಿಸಲಾಗುತ್ತಿದೆ ಎಂಬುದನ್ನು ತಿಳಿಯಲು ಬೊಬ್ಡೆ ಅಲ್ಲಿಗೆ ತೆರಳಿದ್ದರು ಎನ್ನಲಾಗಿದೆ.

ಅಯೋಧ್ಯಾ ಐತಿಹಾಸಿಕ ತೀರ್ಪು ನೀಡಿದ್ದ ಬೊಬ್ಡೆ ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು. ಅವರು ನಿವೃತ್ತರಾಗುವ ಕೆಲವೇ ದಿನಗಳ ಮೊದಲು ಅಯೋಧ್ಯೆ ಐತಿಹಾಸಿಕ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇತ್ತೀಚೆಗೆ ಮಾಜಿ ಸಿಜೆಐ ಅಂದರೆ ಎಸ್.ಎ.ಬೊಬ್ಡೆಗೂ ಮುನ್ನ ಇದ್ದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇದೀಗ ಎಸ್​.ಎ.ಬೊಬ್ಡೆ ಮತ್ತು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ ಭೇಟಿ ಇದೇ ಕಾರಣಕ್ಕೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಅಪ್ಪನ ಸಾಲ ಮಗ ತೀರಿಸಬೇಕಲ್ಲ; ಯುಪಿಎ ಸರ್ಕಾರ ಮಾಡಿದ್ದನ್ನ ನಾವು ತೀರಿಸ್ತಾ ಇದೀವಿ; ಎಲ್​ಪಿಜಿ ಬೆಲೆ ಏರಿಕೆಗೆ ಸಂಗಣ್ಣ ಕರಡಿ ಉತ್ತರ

ಕೋಲಾರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ಕೇರಳದಿಂದ ಬಂದವರೇ ಸೂಪರ್​ ಸ್ಪ್ರೆಡರ್ಸ್

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ