AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ

Maharashtra: ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ
ಮೋಹನ್​ ಭಾಗವತ್​ ಮತ್ತು ಎಸ್​.ಎ.ಬೊಬ್ಡೆ
TV9 Web
| Edited By: |

Updated on: Sep 01, 2021 | 2:19 PM

Share

ಮಾಜಿ ಸಿಜೆಐ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ) (Former CJI) ಎಸ್.ಎ.ಬೊಬ್ಡೆ (S.A.Bobde) ನಿನ್ನೆ (ಆಗಸ್ಟ್​ 31) ಆರ್​ಎಸ್​ಎಸ್​ ಸರಸಂಘಸಂಚಾಲಕ ಮೋಹನ್​ ಭಾಗವತ್​ (Mohan Bhagwat)ರನ್ನು ನಾಗ್ಪುರದಲ್ಲಿ ಭೇಟಿಯಾಗಿ ಸುಮಾರು 1 ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಯಲ್ಲೇ ಈ ಭೇಟಿ ನಡೆದಿದೆ ಎಂದು ನಂಬಲರ್ಹ ಮೂಲಗಳಿಂದಲೇ ತಿಳಿದುಬಂದಿದ್ದರೂ, ಆರ್​ಎಸ್​ಎಸ್​ ಮಾತ್ರ ಇದನ್ನು ನಿರಾಕರಿಸಿದೆ. ಒಂದು ತಾಸುಗಳ ಮಾತುಕತೆ ನಡೆದಿದ್ದರೂ, ಯಾವ ವಿಷಯದ ಬಗ್ಗೆ ಚರ್ಚೆ ನಡೆಯಿತು ಎಂಬುದಿನ್ನೂ ತಿಳಿದಿಲ್ಲ. ಹಾಗೇ, ಮೋಹನ್​ ಭಾಗವತ್ ಆಗಲೀ, ಎಸ್.ಎ.ಬೊಬ್ಡೆಯವರಾಗಲೀ ಈ ಬಗ್ಗೆ ಇನ್ನೂ ಮಾತನಾಡಿಲ್ಲ.

ಬೊಬ್ಡೆಯವರು ಆರ್​ಎಸ್​ಎಸ್​ ಕಚೇರಿಯನ್ನಾಗಲೀ, ಮುಖ್ಯಸ್ಥ ಮೋಹನ್​ ಭಾಗವತ್​​ ಅವರನ್ನಾಗಲಿ ಭೇಟಿಯಾಗಿದ್ದು ಇದೇ ಮೊದಲು. ಇಲ್ಲಷ್ಟೇ ಅಲ್ಲದೆ, ಮಹಲ್​ ಏರಿಯಾದಲ್ಲಿರುವ, ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ್​ ಬಲಿರಾಮ್​ ಹೆಗ್ಡೆವಾರ್ ಅವರ 100 ವರ್ಷಗಳಷ್ಟು ಹಳೆಯದಾದ ಮನೆಗೂ ಎಸ್​.ಎ.ಬೊಬ್ಡೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ​​ ಆ ಮನೆಯನ್ನು ಹೇಗೆ ನಿರ್ವಹಿಸಲಾಗುತ್ತಿದೆ..ಹೇಗೆಲ್ಲ ರಕ್ಷಿಸಲಾಗುತ್ತಿದೆ ಎಂಬುದನ್ನು ತಿಳಿಯಲು ಬೊಬ್ಡೆ ಅಲ್ಲಿಗೆ ತೆರಳಿದ್ದರು ಎನ್ನಲಾಗಿದೆ.

ಅಯೋಧ್ಯಾ ಐತಿಹಾಸಿಕ ತೀರ್ಪು ನೀಡಿದ್ದ ಬೊಬ್ಡೆ ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು. ಅವರು ನಿವೃತ್ತರಾಗುವ ಕೆಲವೇ ದಿನಗಳ ಮೊದಲು ಅಯೋಧ್ಯೆ ಐತಿಹಾಸಿಕ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇತ್ತೀಚೆಗೆ ಮಾಜಿ ಸಿಜೆಐ ಅಂದರೆ ಎಸ್.ಎ.ಬೊಬ್ಡೆಗೂ ಮುನ್ನ ಇದ್ದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇದೀಗ ಎಸ್​.ಎ.ಬೊಬ್ಡೆ ಮತ್ತು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ ಭೇಟಿ ಇದೇ ಕಾರಣಕ್ಕೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಅಪ್ಪನ ಸಾಲ ಮಗ ತೀರಿಸಬೇಕಲ್ಲ; ಯುಪಿಎ ಸರ್ಕಾರ ಮಾಡಿದ್ದನ್ನ ನಾವು ತೀರಿಸ್ತಾ ಇದೀವಿ; ಎಲ್​ಪಿಜಿ ಬೆಲೆ ಏರಿಕೆಗೆ ಸಂಗಣ್ಣ ಕರಡಿ ಉತ್ತರ

ಕೋಲಾರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ಕೇರಳದಿಂದ ಬಂದವರೇ ಸೂಪರ್​ ಸ್ಪ್ರೆಡರ್ಸ್

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ