AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ

Maharashtra: ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ರನ್ನು ಭೇಟಿಯಾದ ಮಾಜಿ ಸಿಜೆಐ ಎಸ್​.ಎ.ಬೊಬ್ಡೆ; ಒಂದು ತಾಸು ಮಾತುಕತೆ
ಮೋಹನ್​ ಭಾಗವತ್​ ಮತ್ತು ಎಸ್​.ಎ.ಬೊಬ್ಡೆ
TV9 Web
| Edited By: |

Updated on: Sep 01, 2021 | 2:19 PM

Share

ಮಾಜಿ ಸಿಜೆಐ (ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ) (Former CJI) ಎಸ್.ಎ.ಬೊಬ್ಡೆ (S.A.Bobde) ನಿನ್ನೆ (ಆಗಸ್ಟ್​ 31) ಆರ್​ಎಸ್​ಎಸ್​ ಸರಸಂಘಸಂಚಾಲಕ ಮೋಹನ್​ ಭಾಗವತ್​ (Mohan Bhagwat)ರನ್ನು ನಾಗ್ಪುರದಲ್ಲಿ ಭೇಟಿಯಾಗಿ ಸುಮಾರು 1 ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ನಾಗ್ಪುರದ ಆರ್​ಎಸ್​ಎಸ್​ ಪ್ರಧಾನ ಕಚೇರಿಯಲ್ಲೇ ಈ ಭೇಟಿ ನಡೆದಿದೆ ಎಂದು ನಂಬಲರ್ಹ ಮೂಲಗಳಿಂದಲೇ ತಿಳಿದುಬಂದಿದ್ದರೂ, ಆರ್​ಎಸ್​ಎಸ್​ ಮಾತ್ರ ಇದನ್ನು ನಿರಾಕರಿಸಿದೆ. ಒಂದು ತಾಸುಗಳ ಮಾತುಕತೆ ನಡೆದಿದ್ದರೂ, ಯಾವ ವಿಷಯದ ಬಗ್ಗೆ ಚರ್ಚೆ ನಡೆಯಿತು ಎಂಬುದಿನ್ನೂ ತಿಳಿದಿಲ್ಲ. ಹಾಗೇ, ಮೋಹನ್​ ಭಾಗವತ್ ಆಗಲೀ, ಎಸ್.ಎ.ಬೊಬ್ಡೆಯವರಾಗಲೀ ಈ ಬಗ್ಗೆ ಇನ್ನೂ ಮಾತನಾಡಿಲ್ಲ.

ಬೊಬ್ಡೆಯವರು ಆರ್​ಎಸ್​ಎಸ್​ ಕಚೇರಿಯನ್ನಾಗಲೀ, ಮುಖ್ಯಸ್ಥ ಮೋಹನ್​ ಭಾಗವತ್​​ ಅವರನ್ನಾಗಲಿ ಭೇಟಿಯಾಗಿದ್ದು ಇದೇ ಮೊದಲು. ಇಲ್ಲಷ್ಟೇ ಅಲ್ಲದೆ, ಮಹಲ್​ ಏರಿಯಾದಲ್ಲಿರುವ, ಆರ್​ಎಸ್​ಎಸ್​ ಸಂಸ್ಥಾಪಕ ಕೇಶವ್​ ಬಲಿರಾಮ್​ ಹೆಗ್ಡೆವಾರ್ ಅವರ 100 ವರ್ಷಗಳಷ್ಟು ಹಳೆಯದಾದ ಮನೆಗೂ ಎಸ್​.ಎ.ಬೊಬ್ಡೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ​​ ಆ ಮನೆಯನ್ನು ಹೇಗೆ ನಿರ್ವಹಿಸಲಾಗುತ್ತಿದೆ..ಹೇಗೆಲ್ಲ ರಕ್ಷಿಸಲಾಗುತ್ತಿದೆ ಎಂಬುದನ್ನು ತಿಳಿಯಲು ಬೊಬ್ಡೆ ಅಲ್ಲಿಗೆ ತೆರಳಿದ್ದರು ಎನ್ನಲಾಗಿದೆ.

ಅಯೋಧ್ಯಾ ಐತಿಹಾಸಿಕ ತೀರ್ಪು ನೀಡಿದ್ದ ಬೊಬ್ಡೆ ಎಸ್​.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್​ ಮಾಡಿದ್ದರು. 2021ರ ಏಪ್ರಿಲ್​ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು. ಅವರು ನಿವೃತ್ತರಾಗುವ ಕೆಲವೇ ದಿನಗಳ ಮೊದಲು ಅಯೋಧ್ಯೆ ಐತಿಹಾಸಿಕ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಇತ್ತೀಚೆಗೆ ಮಾಜಿ ಸಿಜೆಐ ಅಂದರೆ ಎಸ್.ಎ.ಬೊಬ್ಡೆಗೂ ಮುನ್ನ ಇದ್ದ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಇದೀಗ ಎಸ್​.ಎ.ಬೊಬ್ಡೆ ಮತ್ತು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್​ ಭಾಗವತ್​ ಭೇಟಿ ಇದೇ ಕಾರಣಕ್ಕೆ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: ಅಪ್ಪನ ಸಾಲ ಮಗ ತೀರಿಸಬೇಕಲ್ಲ; ಯುಪಿಎ ಸರ್ಕಾರ ಮಾಡಿದ್ದನ್ನ ನಾವು ತೀರಿಸ್ತಾ ಇದೀವಿ; ಎಲ್​ಪಿಜಿ ಬೆಲೆ ಏರಿಕೆಗೆ ಸಂಗಣ್ಣ ಕರಡಿ ಉತ್ತರ

ಕೋಲಾರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ಕೇರಳದಿಂದ ಬಂದವರೇ ಸೂಪರ್​ ಸ್ಪ್ರೆಡರ್ಸ್

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ