AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ

Chandrababu Naidu: ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಎಂದು ವಿಪ್ರೋ ವೃತ್ತದಲ್ಲಿ ಪ್ರತಿಭಟನಾನಿರತ ಟೆಕ್ಕಿಗಳು ಹೇಳಿದರು

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 13, 2023 | 8:43 PM

Share

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಕಳೆದ ವಾರ ಬಂಧನಕ್ಕೊಳಗಾಗಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ TDP) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಬೆಂಬಲಿಸಿ ಐಟಿ ವಲಯದ ಉದ್ಯೋಗಿಗಳು (Techies) ಹೈದರಾಬಾದ್‌ನ ಸೈಬರಾಬಾದ್‌ (Cyberabad, Hyderabad) ವಿಪ್ರೋ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟಿಡಿಪಿ ಧ್ವಜಗಳು, ಫಲಕಗಳು ಮತ್ತು ಬ್ಯಾನರ್‌ಗಳನ್ನು ಎತ್ತಿಹಿಡಿದಿದ್ದರು, ‘ ನಾನು ನಮ್ಮ ನಾಯಕ ಸಿಬಿಎನ್‌ ಜೊತೆಗೆ ಇದ್ದೇನೆ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವೆಲ್ಲಾ ಇಲ್ಲಿ ಸೇರಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆಗಿಳಿದರು ಮತ್ತು ಈ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಕಂಡುಬಂದಿದ್ದರಿಂದ ಜನಸಂದಣಿಯನ್ನು ಚದುರಿಸಿದರು.

ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High court) ಚಂದ್ರಬಾಬು ನಾಯ್ಡು ಅವರನ್ನು ತನ್ನ ಕಸ್ಟಡಿಗೆ ತೆಗೆದುಕೊಳ್ಳದಂತೆ ಸಿಐಡಿಗೆ (CID) ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಮಂಗಳವಾರ ಎಸಿಬಿ ಕೋರ್ಟ್ ಚಂದ್ರಬಾಬು ನಾಯ್ಡು ಅವರ ಹೌಸ್ ರಿಮಾಂಡ್ ಅರ್ಜಿಯನ್ನು ವಜಾಗೊಳಿಸಿದ್ದು, ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ (Rajahmundry central jail) ಅವರಿಗೆ ಸಾಕಷ್ಟು ಭದ್ರತೆ ಇದೆ ಎಂದು ಹೇಳಿದೆ. ಎಸಿಬಿ ನ್ಯಾಯಾಲಯವು (ACB court) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಂತರ ನಾಯ್ಡು ಅವರನ್ನು ಸೋಮವಾರ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ