AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ

Chandrababu Naidu: ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಒಗ್ಗಟ್ಟಾಗಿದ್ದೇವೆ ಎಂದು ವಿಪ್ರೋ ವೃತ್ತದಲ್ಲಿ ಪ್ರತಿಭಟನಾನಿರತ ಟೆಕ್ಕಿಗಳು ಹೇಳಿದರು

ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
ಚಂದ್ರಬಾಬು ನಾಯ್ಡು ಬಂಧನ ವಿರೋಧಿಸಿ ಸೈಬರಾಬಾದ್‌ ವಿಪ್ರೋ ವೃತ್ತದಲ್ಲಿ ಟೆಕ್ಕಿಗಳ ಪ್ರತಿಭಟನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 13, 2023 | 8:43 PM

Share

ಕೌಶಲ್ಯಾಭಿವೃದ್ಧಿ ಪ್ರಕರಣದಲ್ಲಿ ಕಳೆದ ವಾರ ಬಂಧನಕ್ಕೊಳಗಾಗಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ TDP) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರನ್ನು ಬೆಂಬಲಿಸಿ ಐಟಿ ವಲಯದ ಉದ್ಯೋಗಿಗಳು (Techies) ಹೈದರಾಬಾದ್‌ನ ಸೈಬರಾಬಾದ್‌ (Cyberabad, Hyderabad) ವಿಪ್ರೋ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟಿಡಿಪಿ ಧ್ವಜಗಳು, ಫಲಕಗಳು ಮತ್ತು ಬ್ಯಾನರ್‌ಗಳನ್ನು ಎತ್ತಿಹಿಡಿದಿದ್ದರು, ‘ ನಾನು ನಮ್ಮ ನಾಯಕ ಸಿಬಿಎನ್‌ ಜೊತೆಗೆ ಇದ್ದೇನೆ. ಪ್ರಜಾಪ್ರಭುತ್ವವನ್ನು ಉಳಿಸಲು ಈ ಬಿಕ್ಕಟ್ಟಿನ ಸಮಯದಲ್ಲಿ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾವೆಲ್ಲಾ ಇಲ್ಲಿ ಸೇರಿದ್ದೇವೆ ಎಂದು ಪ್ರತಿಭಟನಾಕಾರರು ಹೇಳಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರೊಂದಿಗೆ ಘರ್ಷಣೆಗಿಳಿದರು ಮತ್ತು ಈ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಕಂಡುಬಂದಿದ್ದರಿಂದ ಜನಸಂದಣಿಯನ್ನು ಚದುರಿಸಿದರು.

ಆಂಧ್ರಪ್ರದೇಶ ಹೈಕೋರ್ಟ್ (Andhra Pradesh High court) ಚಂದ್ರಬಾಬು ನಾಯ್ಡು ಅವರನ್ನು ತನ್ನ ಕಸ್ಟಡಿಗೆ ತೆಗೆದುಕೊಳ್ಳದಂತೆ ಸಿಐಡಿಗೆ (CID) ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 19 ಕ್ಕೆ ಮುಂದೂಡಿದೆ. ಮಂಗಳವಾರ ಎಸಿಬಿ ಕೋರ್ಟ್ ಚಂದ್ರಬಾಬು ನಾಯ್ಡು ಅವರ ಹೌಸ್ ರಿಮಾಂಡ್ ಅರ್ಜಿಯನ್ನು ವಜಾಗೊಳಿಸಿದ್ದು, ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ (Rajahmundry central jail) ಅವರಿಗೆ ಸಾಕಷ್ಟು ಭದ್ರತೆ ಇದೆ ಎಂದು ಹೇಳಿದೆ. ಎಸಿಬಿ ನ್ಯಾಯಾಲಯವು (ACB court) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಂತರ ನಾಯ್ಡು ಅವರನ್ನು ಸೋಮವಾರ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು