AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಚಿನ್​ ಶೇಕ್ ಹ್ಯಾಂಡ್ ಕೊಟ್ಟಾಗ ಇನ್ಮುಂದೆ ಸ್ನಾನವೇ ಮಾಡೋದು ಬೇಡ ಅಂತಾ ಅಂದುಕೊಂಡಿದ್ದೆ’

ಭಾರತದ ಮಾಜಿ ಕ್ರಿಕೆಟಿಗ, ಆಲ್​ ರೌಂಡರ್ ಯುವರಾಜ್ ಸಿಂಗ್ ತಮ್ಮ ಬಹುಕಾಲದ ಗುಟ್ಟೊಂದನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಯುವಿ ಪಾದಾರ್ಪಣೆ ಮಾಡಿದ್ದು 2000ನೇ ಇಸವಿಯಲ್ಲಿ. ಭಾರತದ ಪರವಾಗಿ ಅಂಡರ್​-19 ವಿಶ್ವಕಪ್ ತಂಡದಲ್ಲಿ ಮಿಂಚಿದ್ದ ಯುವಿಯನ್ನ ಆಗಷ್ಟೇ ಅಂತಾರಾಷ್ಟ್ರೀಯ ತಂಡಕ್ಕೆ ಬರಮಾಡಿಕೊಳ್ಳಲಾಗಿತ್ತು. ಆಗ ಭಾರತದ ತಂಡದಲ್ಲಿ ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ಉತ್ತುಂಗದಲ್ಲಿದ್ದರು. ಬಾಲ್ಯದಿಂದಲೂ ಸಚಿನ್ ಆಟವನ್ನು ನೋಡಿ, ಅವರಿಂದ ಪ್ರೇರೇಪಣೆಗೊಂಡಿದ್ದ ಯುವರಾಜ್​ ಸಿಂಗ್​ ಮೊಟ್ಟ ಮೊದಲ ಬಾರಿಗೆ ಸಚಿನ್​ರನ್ನು ನೋಡಿದಾಗ ರೋಮಾಂಚನಗೊಂಡಿದ್ದರಂತೆ. ‘ಸ್ನಾನ ಮಾಡಲೇಬಾರದು ಎನ್ನುವಷ್ಟು […]

‘ಸಚಿನ್​ ಶೇಕ್ ಹ್ಯಾಂಡ್ ಕೊಟ್ಟಾಗ ಇನ್ಮುಂದೆ ಸ್ನಾನವೇ ಮಾಡೋದು ಬೇಡ ಅಂತಾ ಅಂದುಕೊಂಡಿದ್ದೆ’
ಪೃಥ್ವಿಶಂಕರ
|

Updated on:Nov 14, 2020 | 6:53 PM

Share

ಭಾರತದ ಮಾಜಿ ಕ್ರಿಕೆಟಿಗ, ಆಲ್​ ರೌಂಡರ್ ಯುವರಾಜ್ ಸಿಂಗ್ ತಮ್ಮ ಬಹುಕಾಲದ ಗುಟ್ಟೊಂದನ್ನು ಇತ್ತೀಚೆಗೆ ಹಂಚಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಯುವಿ ಪಾದಾರ್ಪಣೆ ಮಾಡಿದ್ದು 2000ನೇ ಇಸವಿಯಲ್ಲಿ. ಭಾರತದ ಪರವಾಗಿ ಅಂಡರ್​-19 ವಿಶ್ವಕಪ್ ತಂಡದಲ್ಲಿ ಮಿಂಚಿದ್ದ ಯುವಿಯನ್ನ ಆಗಷ್ಟೇ ಅಂತಾರಾಷ್ಟ್ರೀಯ ತಂಡಕ್ಕೆ ಬರಮಾಡಿಕೊಳ್ಳಲಾಗಿತ್ತು.

ಆಗ ಭಾರತದ ತಂಡದಲ್ಲಿ ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ಉತ್ತುಂಗದಲ್ಲಿದ್ದರು. ಬಾಲ್ಯದಿಂದಲೂ ಸಚಿನ್ ಆಟವನ್ನು ನೋಡಿ, ಅವರಿಂದ ಪ್ರೇರೇಪಣೆಗೊಂಡಿದ್ದ ಯುವರಾಜ್​ ಸಿಂಗ್​ ಮೊಟ್ಟ ಮೊದಲ ಬಾರಿಗೆ ಸಚಿನ್​ರನ್ನು ನೋಡಿದಾಗ ರೋಮಾಂಚನಗೊಂಡಿದ್ದರಂತೆ.

‘ಸ್ನಾನ ಮಾಡಲೇಬಾರದು ಎನ್ನುವಷ್ಟು ಪುಳಕಿತನಾಗಿದ್ದೆ’ ಅದರಲ್ಲೂ, ತಂಡದ ಆಟಗಾರರಿದ್ದ ಬಸ್​ನಲ್ಲಿ ಸಚಿನ್ ಸ್ವತಃ ತಮ್ಮ ಪರಿಚಯ ಮಾಡಿಕೊಂಡು ಶೇಕ್ ಹ್ಯಾಂಡ್ ಮಾಡಿದ ಕ್ಷಣವನ್ನು ಮರೆಯಲು ಸಾಧ್ಯವೇ ಇಲ್ಲ ಎಂದಿರುವ ಯುವಿ, ಆ ಕ್ಷಣದಲ್ಲಿ ತಾವೆಷ್ಟು ಪುಳಕಿತಗೊಂಡಿದ್ದರು ಎಂದು ಹೇಳಿಕೊಂಡಿದ್ದಾರೆ. ಸಚಿನ್ ಶೇಕ್ ಹ್ಯಾಂಡ್ ಮಾಡಿದ ಬಳಿಕ ತಮ್ಮ ಕೈಯಿಂದ ಇಡೀ ದೇಹವನ್ನು ಸ್ಪರ್ಶಿಸಿಕೊಂಡ ಯುವರಾಜ್ ಸಿಂಗ್ ಆ​ ಶೇಕ್ ಹ್ಯಾಂಡ್​ನ ಸ್ಪರ್ಶ ಶಾಶ್ವತವಾಗಿ ಉಳಿಯಬೇಕೆಂದು ಸ್ನಾನ ಮಾಡಲೇಬಾರದು ಎಂದು ನಿಶ್ಚಯಿಸಿಬಿಟ್ಟರಂತೆ.

ನೆಟ್​ಫ್ಲಿಕ್ಸ್​ನಲ್ಲಿ ಅಪ್ಲೋಡ್ ಆಗಿರುವ ಸ್ಟೋರೀಸ್ ಬಿಹೈಂಡ್ ದಿ ಸ್ಟೋರಿ ಎಂಬ ವಿಡಿಯೋದಲ್ಲಿ ತಮ್ಮ ಕ್ರಿಕೆಟ್ ಪಯಣದ ಕುರಿತು ಮಾತನಾಡಿರುವ ಯುವಿ ಅಂಡರ್-19 ನಂತರ ಅಂತಾರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿ ಸಚಿನ್, ಗಂಗೂಲಿ, ಕುಂಬ್ಳೆ, ದ್ರಾವಿಡ್, ಶ್ರೀನಾಥ್​ರೊಂದಿಗೆ ಆಡುವಾಗ ಸ್ವತಃ ತಾನೆಲ್ಲಿದ್ದೇನೆ ಎಂದು ಗೊಂದಲವಾಗುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.

ಸಚಿನ್ ಹೊಸಬರಿಗೆ ನೀಡುತ್ತಿದ್ದ ಪ್ರೋತ್ಸಾಹ ಹಾಗೂ ಮೈದಾನದಾಚೆ ಬೇರೆಯವರೊಂದಿಗೆ ನಡೆದುಕೊಳ್ಳುತ್ತಿದ್ದ ಕುರಿತು ಮಾತನಾಡಿರುವ ಯುವರಾಜ್​ ಆಡುವಾಗ ಸಚಿನ್ ಮೈದಾನದಲ್ಲಿದ್ದರೆ ಮಾತ್ರ ಗೆಲ್ಲುವ ಭರವಸೆ ಇರುತ್ತಿತ್ತು. ಅವರು ಔಟ್ ಆದ ಕೂಡಲೇ ಅಭಿಮಾನಿಗಳ ಮುಖವು ಬಾಡುತ್ತಿತ್ತು. ಹಾಗಾಗಿ, ಇಡೀ ತಂಡದ ಭಾರವನ್ನು ಹೊತ್ತು ಮೈದಾನಕ್ಕಿಳಿಯುತ್ತಿದ್ದ ಸಚಿನ್​ ಆಟ ಮುಗಿದ ನಂತರ ನಮ್ಮೊಂದಿಗೆ ಬೆರೆಯುತ್ತಿದ್ದ ರೀತಿಯನ್ನು ಮರೆಯಲು ಅಸಾಧ್ಯ ಎಂದು ಹೇಳಿದ್ದಾರೆ.

Published On - 6:46 pm, Sat, 14 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​