AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದೊಳಗೆ ಅಧಿಕೃತ ಸಿಎಂ ನಿವಾಸ ಖಾಲಿ ಮಾಡಲಿದ್ದಾರೆ ಅರವಿಂದ್ ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರದೊಳಗೆ ತಮ್ಮ ಮನೆ (ಸಿಎಂ ನಿವಾಸ) ಖಾಲಿ ಮಾಡಲು ನಿರ್ಧರಿಸಿದ್ದಾರೆ. ಅವರ ಭದ್ರತೆಯ ಬಗ್ಗೆ ಕಳವಳವಿದೆ, ಅವರ ಮೇಲೆ ಹಲವಾರು ದಾಳಿಗಳು ನಡೆದಿವೆ. ಭದ್ರತಾ ಸಮಸ್ಯೆ ಇದೆ ಎಂದು ನಾವು ಅವರಿಗೆ ಅರ್ಥಮಾಡಿಸಲು ಪ್ರಯತ್ನಿಸಿದ್ದೇವೆ, ಬಿಜೆಪಿಯವರು ತಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪಾಠಕ್ ಹೇಳಿದ್ದಾರೆ.

ಒಂದು ವಾರದೊಳಗೆ ಅಧಿಕೃತ ಸಿಎಂ ನಿವಾಸ ಖಾಲಿ ಮಾಡಲಿದ್ದಾರೆ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 18, 2024 | 1:14 PM

Share

ದೆಹಲಿ ಸೆಪ್ಟೆಂಬರ್ 18: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಒಂದು ವಾರದೊಳಗೆ ತೆರಳಲಿದ್ದಾರೆ ಎಂದು ಆಪ್ ಸಂಸದ ಸಂಜಯ್ ಸಿಂಗ್  (Sanjay Singh) ಬುಧವಾರ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಆಪ್ತರಾಗಿದ್ದ ಆಪ್ ನಾಯಕಿ ಅತಿಶಿ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.

ಭದ್ರತೆಯ ಕಾರಣದಿಂದ ಮನೆ ಖಾಲಿ ಮಾಡದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮನವೊಲಿಸಲು ಆಪ್ ನಾಯಕರು ಪ್ರಯತ್ನಿಸಿದ್ದಾರೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ. ಆದರೆ, ಕೇಜ್ರಿವಾಲ್ ಅವರ ಸಲಹೆಯನ್ನು ಕೇಳಲು ನಿರಾಕರಿಸಿದರು.

“ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರದೊಳಗೆ ತಮ್ಮ ಮನೆ (ಸಿಎಂ ನಿವಾಸ) ಖಾಲಿ ಮಾಡಲು ನಿರ್ಧರಿಸಿದ್ದಾರೆ. ಅವರ ಭದ್ರತೆಯ ಬಗ್ಗೆ ಕಳವಳವಿದೆ, ಅವರ ಮೇಲೆ ಹಲವಾರು ದಾಳಿಗಳು ನಡೆದಿವೆ. ಭದ್ರತಾ ಸಮಸ್ಯೆ ಇದೆ ಎಂದು ನಾವು ಅವರಿಗೆ ಅರ್ಥಮಾಡಿಸಲು ಪ್ರಯತ್ನಿಸಿದ್ದೇವೆ, ಬಿಜೆಪಿಯವರು ತಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಆದಾಗ್ಯೂ, ದೇವರು ನನ್ನನ್ನು ರಕ್ಷಿಸುತ್ತಾನೆ ಎಂದು ಎಂದು ಕೇಜ್ರಿವಾಲ್ ಹೇಳಿರುವುದಾಗಿ ಸಂಜಯ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ದೆಹಲಿ ಸಿಎಂ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ಸೋಮವಾರ ರಾಜೀನಾಮೆ ನೀಡಿದ್ದಾರೆ. ದೆಹಲಿಯ ಜನರಿಂದ “ಪ್ರಾಮಾಣಿಕತೆಯ ಪ್ರಮಾಣಪತ್ರ” ಪಡೆಯುವವರೆಗೆ ಮುಖ್ಯಮಂತ್ರಿಯ ಸ್ಥಾನದಲ್ಲಿರುವುದಿಲ್ಲ ಎಂದು ಅವರು ಹೇಳಿದರು. ಜನಸಾಮಾನ್ಯರು ನಮ್ಮನ್ನು ಒಪ್ಪಿ ಅಧಿಕಾರಕ್ಕೆ ತಂದ ನಂತರವೇ ತಾವು ಮತ್ತು ಮನೀಶ್ ಸಿಸೋಡಿಯಾ ಅವರು ಸರ್ಕಾರಿ ಪಾತ್ರಗಳನ್ನು ಒಪ್ಪಿಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಅದೇ ವೇಳೆ ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸಬೇಕು ಎಂದು ಕೇಜ್ರಿವಾಲ್ ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದೇ ಆರೋಪದ ಮೇಲೆ ಜೂನ್ 26ರಂದು ಸಿಬಿಐ ಅವರನ್ನು ಬಂಧಿಸಿತ್ತು. ಏತನ್ಮಧ್ಯೆ, ರಾಜೀನಾಮೆ ನೀಡುವಂತೆ ಒತ್ತಾಯಿಸಲು ಬಿಜೆಪಿ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ಆಮ್ ಆದ್ಮಿ ಪಕ್ಷದ ಸಂಸದ ಸಂದೀಪ್ ಪಾಠಕ್ ಆರೋಪಿಸಿದ್ದಾರೆ.

ಇದನ್ನೂ ಓದಿ: PM Surya Ghar Yojana: ಸೂರ್ಯ ಘರ್ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

“ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿ, ರಾಜೀನಾಮೆ ಪಡೆದು ಆಮ್ ಆದ್ಮಿ ಪಕ್ಷವನ್ನು ಒಡೆಯುವುದು ಬಿಜೆಪಿಯ ಗುರಿಯಾಗಿತ್ತು. ಈಗ ಅರವಿಂದ್ ಕೇಜ್ರಿವಾಲ್ ಹೊರಗಿದ್ದಾರೆ, ಪಕ್ಷ ಒಡೆಯಲಿಲ್ಲ. ಬಿಜೆಪಿಯ ಸಂಪೂರ್ಣ ಯೋಜನೆ ವಿಫಲವಾಗಿದೆ. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಅವರ ವಿರುದ್ಧ ಯಾವುದೇ ಭ್ರಷ್ಟಾಚಾರ ಪ್ರಕರಣ ಇಲ್ಲ ಎಂದು ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ ಆದರೆ ಅವರು ತಮ್ಮ ನೈತಿಕತೆ ಮತ್ತು ತತ್ವಗಳಿಂದ ರಾಜೀನಾಮೆ ನೀಡಿದ್ದಾರೆ ಎಂದು ಪಾಠಕ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು