AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪಗಳ ಬಗ್ಗೆ ಹೈಕೋರ್ಟ್​ ನ್ಯಾಯಮೂರ್ತಿಯಿಂದ ತನಿಖೆ: ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್

ಶಿವಸೇನೆಯ ಸಂಸದ ಸಂಜಯ್ ರಾವುತ್ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಭಾನುವಾರದ ಅಂಕಣ ‘ರೋಹ್​ತೊಕ್’ನಲ್ಲಿ​ ಅನಿಲ್ ದೇಶ್​ಮುಖ್ ಅವರನ್ನು ‘ಆಕ್ಸಿಡೆಂಟಲ್ ಹೋಂ ಮಿನಿಸ್ಟರ್’ ಎಂದು ಟೀಕಿಸಿದ್ದರು.

ಭ್ರಷ್ಟಾಚಾರ ಆರೋಪಗಳ ಬಗ್ಗೆ ಹೈಕೋರ್ಟ್​ ನ್ಯಾಯಮೂರ್ತಿಯಿಂದ ತನಿಖೆ: ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶ್​ಮುಖ್
ಮಹಾರಾಷ್ಟ್ರದ ಗೃಹ ಸಚಿವ ಅನಿಲ್​ ದೇಶ್​ಮುಖ್
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 28, 2021 | 3:43 PM

Share

ಮುಂಬೈ: ತಮ್ಮ ವಿರುದ್ಧ ಮುಂಬೈನ ಮಾಜಿ ಪೊಲೀಸ್​ ಆಯುಕ್ತ ಪರಮ್​ವೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ತನಿಖೆ ನಡೆಸಲಿದ್ದಾರೆ ಎಂದು ಮಹಾರಾಷ್ಟ್ರ ಗೃಹಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. ತನಿಖೆಯ ನಂತರ ಸತ್ಯ ಹೊರಬರಲಿದೆ ಎಂದು ಸಚಿವರು ನಾಗಪುರ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಮಾರ್ಚ್ 20ರಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದ ಹಿಂದಿನ ಮುಂಬೈ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್, ಗೃಹ ಸಚಿವ ಅನಿಲ್ ದೇಶ್​ಮುಖ್ ಮುಂಬೈ ಪೊಲೀಸ್ ಅಧಿಕಾರಿಗಳು ಪ್ರತಿತಿಂಗಳು ₹ 100 ಕೋಟಿ ಸಂಗ್ರಹಿಸಿ ಕೊಡಬೇಕು ಎಂಬ ಸೂಚನೆ ನೀಡಿದ್ದರು ಎಂದು ಆರೋಪಿಸಿದ್ದರು. ಈ ಪತ್ರವು ಮಹಾರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

ತಮ್ಮ ವಿರುದ್ಧದ ಆರೋಪಗಳನ್ನು ದೇಶ್​ಮುಖ್ ಸಾರಾಸಗಟಾಗಿ ನಿರಾಕರಿಸಿದ್ದರು. ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮನೆ ಎದುರು ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿದ್ದ ಪ್ರಕರಣ ನಿರ್ವಹಣೆಯಲ್ಲಿ ಆದ ಲೋಪಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಮಾರ್ಚ್ 17ರಂದು ಪರಮ್​ಬೀರ್ ಸಿಂಗ್ ಅವರನ್ನು ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಿಂದ ಅಷ್ಟೇನು ಮಹತ್ವವಿಲ್ಲದ ಹೋಂಗಾರ್ಡ್ಸ್​ ವಿಭಾಗಕ್ಕೆ ವರ್ಗಾಯಿಸಿತ್ತು.

‘ನನ್ನ ವಿರುದ್ಧ ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೋರಿದ್ದೇನೆ’ ಎಂದು ದೇಶ್​ಮುಖ್ ಭಾನುವಾರ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಲು ಒಪ್ಪಿಗೆ ಸೂಚಿಸಿದೆ. ಸತ್ಯ ಏನಿದ್ದರೂ ಹೊರಬರುತ್ತದೆ ಎಂದು ಹೇಳಿದರು.

ಶಿವಸೇನೆಯ ಸಂಸದ ಸಂಜಯ್ ರಾವುತ್ ಪಕ್ಷದ ಮುಖವಾಣಿ ‘ಸಾಮ್ನಾ’ದಲ್ಲಿ ತಮ್ಮ ಭಾನುವಾರದ ಅಂಕಣ ‘ರೋಹ್​ತೊಕ್’ನಲ್ಲಿ​ ಅನಿಲ್ ದೇಶ್​ಮುಖ್ ಅವರನ್ನು ‘ಆಕ್ಸಿಡೆಂಟಲ್ ಹೋಂ ಮಿನಿಸ್ಟರ್’ ಎಂದು ಟೀಕಿಸಿದ್ದರು. ಎನ್​ಸಿಪಿಯ ಹಿರಿಯ ನಾಯಕರಾದ ಜಯಂತ್ ಪಾಟೀಲ್ ಮತ್ತು ದಿಲೀಪ್ ವಾಲ್ಸೆ ಗೃಹಸಚಿವರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅನಿಲ್ ದೇಶ್​ಮುಖ್​ ಮಹಾರಾಷ್ಟ್ರದ ಗೃಹಸಚಿವರಾಗಿದ್ದರು ಎಂದು ಸಂಜಯ್ ರಾವುತ್ ಬರೆದಿದ್ದರು.

ಶಿವಸೇನೆ-ಎನ್​​ಸಿಪಿ-ಕಾಂಗ್ರೆಸ್​ ಮೈತ್ರಿ ಸರ್ಕಾರದಲ್ಲಿ ಡ್ಯಾಮೇಜ್ ಕಂಟ್ರೋಲ್​ ವ್ಯವಸ್ಥೆ ಇರಲಿಲ್ಲ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ತಿಂಗಳಿಗೆ ₹ 100 ಕೋಟಿ ಸಂಗ್ರಹಿಸಿಕೊಡುವಂತೆ ದೇಶ್​ಮುಖ್​ ಸೂಚಿಸಿದ್ದರು ಆರೋಪವನ್ನು ಹೇಗೆ ನಿರ್ವಹಿಸಬೇಕು ಎಂಬ ಬಗ್ಗೆ ಸರ್ಕಾರಕ್ಕೆ ಖಚಿತ ನಿಲುವು ಇರಲಿಲ್ಲ ಎಂದು ರಾವುತ್ ತಮ್ಮ ಅಂಕಣ ಬರಹದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: 100 ಕೋಟಿ ವಸೂಲಿ ಆರೋಪದಿಂದ ದೋಸ್ತಿ ಸರ್ಕಾರಕ್ಕೆ ಧಕ್ಕೆಯಿಲ್ಲ, ಅನಿಲ್ ದೇಶ್​ಮುಖ್ ತನಿಖೆಯಾಗಲಿ: ಶರದ್ ಪವಾರ್

ಇದನ್ನೂ ಓದಿ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಒತ್ತಾಯಿಸಿ ನಾಗ್ಪುರ್​ನಲ್ಲಿ ಬಿಜೆಪಿ ಪ್ರತಿಭಟನೆ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ