AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​

ಕರ್ಣನ್​ 2009ರಲ್ಲಿಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​
ಸಿಎಸ್​ ಕರ್ಣನ್
shruti hegde
| Edited By: ಸಾಧು ಶ್ರೀನಾಥ್​|

Updated on:Dec 02, 2020 | 5:46 PM

Share

ಚೆನ್ನೈ: ನ್ಯಾಯಮೂರ್ತಿಗಳ ಪತ್ನಿಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಹೈಕೋರ್ಟ್​​ನ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್​ ಅವರನ್ನು ಇಂದು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್​ 6 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದರು.

ಕರ್ಣನ್​ ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​​​ ನ್ಯಾಯಮೂರ್ತಿಗಳ ಪತ್ನಿಯರ ಬಗ್ಗೆ ಹಾಗೂ ಮಹಿಳಾ ನ್ಯಾಯಮೂರ್ತಿಗಳನ್ನು ನಿಂದಿಸಿದ್ದರು. ಅಷ್ಟೇ ಅಲ್ಲ ಈ ಹೇಳಿಕೆಗಳನ್ನು ಅವರು ಯೂಟ್ಯೂಬ್​ನಲ್ಲೂ ಅಪ್​​ಲೋಡ್​ ಮಾಡಿದ್ದರು.

ಆದರೆ, ಈ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಕಾರಣಕ್ಕೆ ಮದ್ರಾಸ್ ಹೈಕೋರ್ಟ್​ ಪೊಲೀಸರಿಗೆ ಛೀಮಾರಿ ಹಾಕಿತ್ತು. ಇದಾದ ನಂತರದಲ್ಲಿ ಎಚ್ಚೆತ್ತುಕೊಂಡಿರುವ ಚೆನ್ನೈ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನ್ಯಾಯಾಂಗ ನಿಂದನೆ ಮಾಡಿದ್ದಕ್ಕೆ  ಕರ್ಣನ್​ ಅವರನ್ನು ಜೈಲಿಗೆ ಹಾಕಲಾಗಿತ್ತು. ಅಧಿಕಾರದಲ್ಲಿದ್ದಾಗಲೇ ಜೈಲು ಸೇರಿದ ಮೊದಲ ನ್ಯಾಯಮೂರ್ತಿ ಎನ್ನುವ ಕುಖ್ಯಾತಿಗೆ ಕರ್ಣನ್​ ಪಾತ್ರರಾಗಿದ್ದರು. 6 ತಿಂಗಳು ಜೈಲು ಶಿಕ್ಷೆ ಪಡೆದ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು.

ಕರ್ಣನ್​ 2009ರಲ್ಲಿ ಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.  ಹಿರಿಯ ನ್ಯಾಯಮೂರ್ತಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಪತ್ರ ಬರೆದಿದ್ದರು.

ಮಾಸ್ಕ್ ಇಲ್ಲದೆ ಸಂಚರಿಸಿದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ

Published On - 5:14 pm, Wed, 2 December 20

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ