AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​

ಕರ್ಣನ್​ 2009ರಲ್ಲಿಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​
ಸಿಎಸ್​ ಕರ್ಣನ್
shruti hegde
| Edited By: |

Updated on:Dec 02, 2020 | 5:46 PM

Share

ಚೆನ್ನೈ: ನ್ಯಾಯಮೂರ್ತಿಗಳ ಪತ್ನಿಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಹೈಕೋರ್ಟ್​​ನ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್​ ಅವರನ್ನು ಇಂದು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್​ 6 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದರು.

ಕರ್ಣನ್​ ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​​​ ನ್ಯಾಯಮೂರ್ತಿಗಳ ಪತ್ನಿಯರ ಬಗ್ಗೆ ಹಾಗೂ ಮಹಿಳಾ ನ್ಯಾಯಮೂರ್ತಿಗಳನ್ನು ನಿಂದಿಸಿದ್ದರು. ಅಷ್ಟೇ ಅಲ್ಲ ಈ ಹೇಳಿಕೆಗಳನ್ನು ಅವರು ಯೂಟ್ಯೂಬ್​ನಲ್ಲೂ ಅಪ್​​ಲೋಡ್​ ಮಾಡಿದ್ದರು.

ಆದರೆ, ಈ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಕಾರಣಕ್ಕೆ ಮದ್ರಾಸ್ ಹೈಕೋರ್ಟ್​ ಪೊಲೀಸರಿಗೆ ಛೀಮಾರಿ ಹಾಕಿತ್ತು. ಇದಾದ ನಂತರದಲ್ಲಿ ಎಚ್ಚೆತ್ತುಕೊಂಡಿರುವ ಚೆನ್ನೈ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನ್ಯಾಯಾಂಗ ನಿಂದನೆ ಮಾಡಿದ್ದಕ್ಕೆ  ಕರ್ಣನ್​ ಅವರನ್ನು ಜೈಲಿಗೆ ಹಾಕಲಾಗಿತ್ತು. ಅಧಿಕಾರದಲ್ಲಿದ್ದಾಗಲೇ ಜೈಲು ಸೇರಿದ ಮೊದಲ ನ್ಯಾಯಮೂರ್ತಿ ಎನ್ನುವ ಕುಖ್ಯಾತಿಗೆ ಕರ್ಣನ್​ ಪಾತ್ರರಾಗಿದ್ದರು. 6 ತಿಂಗಳು ಜೈಲು ಶಿಕ್ಷೆ ಪಡೆದ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು.

ಕರ್ಣನ್​ 2009ರಲ್ಲಿ ಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.  ಹಿರಿಯ ನ್ಯಾಯಮೂರ್ತಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಪತ್ರ ಬರೆದಿದ್ದರು.

ಮಾಸ್ಕ್ ಇಲ್ಲದೆ ಸಂಚರಿಸಿದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ

Published On - 5:14 pm, Wed, 2 December 20

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ