AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​

ಕರ್ಣನ್​ 2009ರಲ್ಲಿಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.

ಮಹಿಳಾ ಜಡ್ಜ್​ಗಳ ನಿಂದನೆ: ಹೈಕೋರ್ಟ್ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್ ಅರೆಸ್ಟ್​
ಸಿಎಸ್​ ಕರ್ಣನ್
shruti hegde
| Edited By: |

Updated on:Dec 02, 2020 | 5:46 PM

Share

ಚೆನ್ನೈ: ನ್ಯಾಯಮೂರ್ತಿಗಳ ಪತ್ನಿಯರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತಾ ಹೈಕೋರ್ಟ್​​ನ ಮಾಜಿ ನ್ಯಾಯಮೂರ್ತಿ ಸಿ ಎಸ್​ ಕರ್ಣನ್​ ಅವರನ್ನು ಇಂದು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕರ್ಣನ್​ 6 ತಿಂಗಳು ಜೈಲು ಶಿಕ್ಷೆ ಅನುಭವಿಸಿದ್ದರು.

ಕರ್ಣನ್​ ಸುಪ್ರೀಂಕೋರ್ಟ್​ ಹಾಗೂ ಹೈಕೋರ್ಟ್​​​ ನ್ಯಾಯಮೂರ್ತಿಗಳ ಪತ್ನಿಯರ ಬಗ್ಗೆ ಹಾಗೂ ಮಹಿಳಾ ನ್ಯಾಯಮೂರ್ತಿಗಳನ್ನು ನಿಂದಿಸಿದ್ದರು. ಅಷ್ಟೇ ಅಲ್ಲ ಈ ಹೇಳಿಕೆಗಳನ್ನು ಅವರು ಯೂಟ್ಯೂಬ್​ನಲ್ಲೂ ಅಪ್​​ಲೋಡ್​ ಮಾಡಿದ್ದರು.

ಆದರೆ, ಈ ಪ್ರಕರಣದಲ್ಲಿ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಕಾರಣಕ್ಕೆ ಮದ್ರಾಸ್ ಹೈಕೋರ್ಟ್​ ಪೊಲೀಸರಿಗೆ ಛೀಮಾರಿ ಹಾಕಿತ್ತು. ಇದಾದ ನಂತರದಲ್ಲಿ ಎಚ್ಚೆತ್ತುಕೊಂಡಿರುವ ಚೆನ್ನೈ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ನ್ಯಾಯಾಂಗ ನಿಂದನೆ ಮಾಡಿದ್ದಕ್ಕೆ  ಕರ್ಣನ್​ ಅವರನ್ನು ಜೈಲಿಗೆ ಹಾಕಲಾಗಿತ್ತು. ಅಧಿಕಾರದಲ್ಲಿದ್ದಾಗಲೇ ಜೈಲು ಸೇರಿದ ಮೊದಲ ನ್ಯಾಯಮೂರ್ತಿ ಎನ್ನುವ ಕುಖ್ಯಾತಿಗೆ ಕರ್ಣನ್​ ಪಾತ್ರರಾಗಿದ್ದರು. 6 ತಿಂಗಳು ಜೈಲು ಶಿಕ್ಷೆ ಪಡೆದ ನಂತರ ಅವರು ಜೈಲಿನಿಂದ ಹೊರ ಬಂದಿದ್ದರು.

ಕರ್ಣನ್​ 2009ರಲ್ಲಿ ಮದ್ರಾಸ್​ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. 2016ರಲ್ಲಿ ಇವರನ್ನು ಕೋಲ್ಕತ್ತಾ ಹೈಕೋರ್ಟ್​ಗೆ ವರ್ಗಾವಣೆ ಮಾಡಲಾಗಿತ್ತು.  ಹಿರಿಯ ನ್ಯಾಯಮೂರ್ತಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ಪತ್ರ ಬರೆದಿದ್ದರು.

ಮಾಸ್ಕ್ ಇಲ್ಲದೆ ಸಂಚರಿಸಿದರೆ ಸೋಂಕಿತರ ಸೇವೆ ಮಾಡುವ ಶಿಕ್ಷೆ: ಗುಜರಾತ್ ಹೈಕೋರ್ಟ್​ ವಿನೂತನ ಕ್ರಮ

Published On - 5:14 pm, Wed, 2 December 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ