AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​

R.N. Ravi, Governor of Tamil Nadu: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2021 | 9:41 AM

Share

ನವದೆಹಲಿ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಆಡಳಿತಾರೂಢ ಡಿಎಂಕೆ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಆಗಾಗ ತಿಕ್ಕಾಟ ಜೋರಾಗಿ ಕೇಳಿಬರುವ ಹಿನ್ನೆಲೆಯಲ್ಲಿ ಅತ್ಯುನ್ನತ ಮಾಜಿ ಪೊಲೀಸ್​ ಅಧಿಕಾರಿಯನ್ನು ಅದರಲ್ಲೂ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥನನ್ನು (R.N. Ravi ) ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕ ಮಾಡಿರುವುದು ಕುತೂಹಲಕಾರಿಯಾಗಿದೆ.

ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ (President Ram Nath Kovind) ಈ ಸಂಬಂಧ ವರ್ಗಾವಣೆ ಆಜ್ಞಗೆ ಸಹಿ ಹಾಕಿದ್ದಾರೆ. ಇದಲ್ಲದೆ ಇನ್ನೂ ಕೆಲ ರಾಜ್ಯಪಾಲರುಗಳನ್ನು ಸಹ ವರ್ಗ/ ಆಯ್ಕೆ ಮಾಡಲಾಗಿದೆ.

ಈ ಮಧ್ಯೆ, ಉತ್ತರಾಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ( Baby Rani Maurya) ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮುಂದಿನ ವರ್ಷ ಉತ್ತರಾಖಂಡದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಬೇಬಿ ರಾಣಿ ಮೌರ್ಯ ಸಕ್ರಿಯ ರಾಜಕೀಯಕ್ಕೆ ಮರಳಲು ಉದ್ದೇಶಿಸಿದ್ದು, ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಿತರೆ ಬದಲಾವಣೆಗಳಲ್ಲಿ ಪಂಜಾಬ್​ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ಹೊತ್ತಿದ್ದ ತಮಿಳುನಾಡು ಹಾಲಿ ಗವರ್ನರ್​ ಬನ್ವರಿಲಾಲ್ ಪುರೋಹಿತ್ (Banwarilal Purohit) ಅವರನ್ನು ಪೂರ್ಣ ಪ್ರಮಾಣದಲ್ಲಿ ಪಂಜಾಬ್​ ರಾಜ್ಯಪಾಲರಾಗಿ ನೇಮಿಸಲಾಗಿದೆ.

Also read: 3 ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ತಮಿಳುನಾಡು ವಿಧಾನಸಭೆ; ಹೊರನಡೆದ ಬಿಜೆಪಿ, ಎಐಎಡಿಎಂಕೆ ಶಾಸಕರು

(former IB chief Governor of Nagaland R.N. Ravi transferred as the next Governor of Tamil Nadu)

Published On - 9:03 am, Fri, 10 September 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ