AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​

R.N. Ravi, Governor of Tamil Nadu: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
TV9 Web
| Edited By: |

Updated on:Sep 10, 2021 | 9:41 AM

Share

ನವದೆಹಲಿ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಆಡಳಿತಾರೂಢ ಡಿಎಂಕೆ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಆಗಾಗ ತಿಕ್ಕಾಟ ಜೋರಾಗಿ ಕೇಳಿಬರುವ ಹಿನ್ನೆಲೆಯಲ್ಲಿ ಅತ್ಯುನ್ನತ ಮಾಜಿ ಪೊಲೀಸ್​ ಅಧಿಕಾರಿಯನ್ನು ಅದರಲ್ಲೂ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥನನ್ನು (R.N. Ravi ) ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕ ಮಾಡಿರುವುದು ಕುತೂಹಲಕಾರಿಯಾಗಿದೆ.

ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ (President Ram Nath Kovind) ಈ ಸಂಬಂಧ ವರ್ಗಾವಣೆ ಆಜ್ಞಗೆ ಸಹಿ ಹಾಕಿದ್ದಾರೆ. ಇದಲ್ಲದೆ ಇನ್ನೂ ಕೆಲ ರಾಜ್ಯಪಾಲರುಗಳನ್ನು ಸಹ ವರ್ಗ/ ಆಯ್ಕೆ ಮಾಡಲಾಗಿದೆ.

ಈ ಮಧ್ಯೆ, ಉತ್ತರಾಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ( Baby Rani Maurya) ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮುಂದಿನ ವರ್ಷ ಉತ್ತರಾಖಂಡದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಬೇಬಿ ರಾಣಿ ಮೌರ್ಯ ಸಕ್ರಿಯ ರಾಜಕೀಯಕ್ಕೆ ಮರಳಲು ಉದ್ದೇಶಿಸಿದ್ದು, ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಿತರೆ ಬದಲಾವಣೆಗಳಲ್ಲಿ ಪಂಜಾಬ್​ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ಹೊತ್ತಿದ್ದ ತಮಿಳುನಾಡು ಹಾಲಿ ಗವರ್ನರ್​ ಬನ್ವರಿಲಾಲ್ ಪುರೋಹಿತ್ (Banwarilal Purohit) ಅವರನ್ನು ಪೂರ್ಣ ಪ್ರಮಾಣದಲ್ಲಿ ಪಂಜಾಬ್​ ರಾಜ್ಯಪಾಲರಾಗಿ ನೇಮಿಸಲಾಗಿದೆ.

Also read: 3 ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ತಮಿಳುನಾಡು ವಿಧಾನಸಭೆ; ಹೊರನಡೆದ ಬಿಜೆಪಿ, ಎಐಎಡಿಎಂಕೆ ಶಾಸಕರು

(former IB chief Governor of Nagaland R.N. Ravi transferred as the next Governor of Tamil Nadu)

Published On - 9:03 am, Fri, 10 September 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ