AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​

R.N. Ravi, Governor of Tamil Nadu: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
ಡಿಎಂಕೆ ಸರ್ಕಾರಕ್ಕೆ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟ ಕೇಂದ್ರ; ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ತಮಿಳುನಾಡಿಗೆ ಹೊಸ ಗವರ್ನರ್​
TV9 Web
| Edited By: ಸಾಧು ಶ್ರೀನಾಥ್​|

Updated on:Sep 10, 2021 | 9:41 AM

Share

ನವದೆಹಲಿ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರಕ್ಕೆ ಕೇಂದ್ರ ಸರ್ಕಾರ ಗಣೇಶನ ಹಬ್ಬದ ಗಿಫ್ಟ್​​ ಕೊಟ್ಟಿದೆ. ನಾಗಾಲ್ಯಾಂಡ್​​ ಗವರ್ನರ್​, ಮಾಜಿ ಐಪಿಎಸ್, ಕೇಂದ್ರದ ಮಧ್ಯಸ್ಥಿಕೆದಾರ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥ ಆರ್​ ಎನ್​ ರವಿ ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕಗೊಂಡಿದ್ದಾರೆ.

ಆಡಳಿತಾರೂಢ ಡಿಎಂಕೆ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಆಗಾಗ ತಿಕ್ಕಾಟ ಜೋರಾಗಿ ಕೇಳಿಬರುವ ಹಿನ್ನೆಲೆಯಲ್ಲಿ ಅತ್ಯುನ್ನತ ಮಾಜಿ ಪೊಲೀಸ್​ ಅಧಿಕಾರಿಯನ್ನು ಅದರಲ್ಲೂ ಗುಪ್ತಚರ ಇಲಾಖೆ ಮಾಜಿ ಮುಖ್ಯಸ್ಥನನ್ನು (R.N. Ravi ) ತಮಿಳುನಾಡಿಗೆ ಹೊಸ ಗವರ್ನರ್​ ಆಗಿ ನೇಮಕ ಮಾಡಿರುವುದು ಕುತೂಹಲಕಾರಿಯಾಗಿದೆ.

ಗುರುವಾರ ರಾತ್ರಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ (President Ram Nath Kovind) ಈ ಸಂಬಂಧ ವರ್ಗಾವಣೆ ಆಜ್ಞಗೆ ಸಹಿ ಹಾಕಿದ್ದಾರೆ. ಇದಲ್ಲದೆ ಇನ್ನೂ ಕೆಲ ರಾಜ್ಯಪಾಲರುಗಳನ್ನು ಸಹ ವರ್ಗ/ ಆಯ್ಕೆ ಮಾಡಲಾಗಿದೆ.

ಈ ಮಧ್ಯೆ, ಉತ್ತರಾಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ( Baby Rani Maurya) ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮುಂದಿನ ವರ್ಷ ಉತ್ತರಾಖಂಡದಲ್ಲಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು ಬೇಬಿ ರಾಣಿ ಮೌರ್ಯ ಸಕ್ರಿಯ ರಾಜಕೀಯಕ್ಕೆ ಮರಳಲು ಉದ್ದೇಶಿಸಿದ್ದು, ರಾಜ್ಯಪಾಲ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಿತರೆ ಬದಲಾವಣೆಗಳಲ್ಲಿ ಪಂಜಾಬ್​ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ಹೊತ್ತಿದ್ದ ತಮಿಳುನಾಡು ಹಾಲಿ ಗವರ್ನರ್​ ಬನ್ವರಿಲಾಲ್ ಪುರೋಹಿತ್ (Banwarilal Purohit) ಅವರನ್ನು ಪೂರ್ಣ ಪ್ರಮಾಣದಲ್ಲಿ ಪಂಜಾಬ್​ ರಾಜ್ಯಪಾಲರಾಗಿ ನೇಮಿಸಲಾಗಿದೆ.

Also read: 3 ಕೃಷಿ ಕಾಯ್ದೆಗಳ ವಿರುದ್ಧ ನಿರ್ಣಯ ಅಂಗೀಕಾರ ಮಾಡಿದ ತಮಿಳುನಾಡು ವಿಧಾನಸಭೆ; ಹೊರನಡೆದ ಬಿಜೆಪಿ, ಎಐಎಡಿಎಂಕೆ ಶಾಸಕರು

(former IB chief Governor of Nagaland R.N. Ravi transferred as the next Governor of Tamil Nadu)

Published On - 9:03 am, Fri, 10 September 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ