ಜಮ್ಮು ಕಾಶ್ಮೀರದ ಮಾಜಿ ಸಚಿವ ಚೌಧರಿ ಬಿಜೆಪಿಗೆ ಸೇರ್ಪಡೆ

Chowdhary Zulfkar Ali joins BJP: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣಾ ದಿನಾಂಕಗಳ ಘೋಷಣೆಯಾಗಿದ್ದು, ಅದರ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಜುಲ್ಫಿಕರ್ ಅಲಿ ಭಾನುವಾರ ಬಿಜೆಪಿ ಸೇರಿದ್ದಾರೆ. ಜಮ್ಮುವಿನ ತ್ರಿಕೂಟ ನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಏರಿದ್ದಾರೆ. ಈ ಬಗ್ಗೆ ಜಮ್ಮು-ಕಾಶ್ಮೀರ ಬಿಜೆಪಿ ಮಾಹಿತಿ ನೀಡಿದೆ.

ಜಮ್ಮು ಕಾಶ್ಮೀರದ ಮಾಜಿ ಸಚಿವ ಚೌಧರಿ ಬಿಜೆಪಿಗೆ ಸೇರ್ಪಡೆ
ಚೌಧರಿ
Image Credit source: India TV

Updated on: Aug 18, 2024 | 2:55 PM

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣಾ ದಿನಾಂಕಗಳ ಘೋಷಣೆಯಾಗಿದ್ದು, ಅದರ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಚೌಧರಿ ಜುಲ್ಫಿಕರ್ ಅಲಿ ಭಾನುವಾರ ಬಿಜೆಪಿ ಸೇರಿದ್ದಾರೆ. ಜಮ್ಮುವಿನ ತ್ರಿಕೂಟ ನಗರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಏರಿದ್ದಾರೆ. ಈ ಬಗ್ಗೆ ಜಮ್ಮು-ಕಾಶ್ಮೀರ ಬಿಜೆಪಿ ಮಾಹಿತಿ ನೀಡಿದೆ.

ಜುಲ್ಫಿಕರ್ ಅಲಿ ಜಮ್ಮು ಮತ್ತು ಕಾಶ್ಮೀರ ಅಪ್ನಿ ಪಕ್ಷದ (ಜೆಕೆಎಪಿ) ಉಪಾಧ್ಯಕ್ಷರಾಗಿದ್ದಾರೆ. ಅವರು ವೃತ್ತಿಯಲ್ಲಿ ವಕೀಲರು.
ಈ ಹಿಂದೆ ರಾಜ್ಯದಲ್ಲಿ ಸಂಪುಟ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

ವೃತ್ತಿಯಲ್ಲಿ ವಕೀಲರಾಗಿರುವ ಅಲಿ ಅವರು 2008 ಮತ್ತು 2014 ರ ವಿಧಾನಸಭಾ ಚುನಾವಣೆಯಲ್ಲಿ ರಾಜೌರಿ ಜಿಲ್ಲೆಯ ದರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಟಿಕೆಟ್‌ನಲ್ಲಿ ಗೆದ್ದಿದ್ದರು. ಪಿಟಿಐ ವರದಿಯ ಪ್ರಕಾರ, ಅವರು 2015 ರಿಂದ 2018 ರವರೆಗೆ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಜೂನ್ 2018 ರಲ್ಲಿ ಬಿಜೆಪಿ ಸರ್ಕಾರದಿಂದ ಹೊರಬಂದ ನಂತರ ಸಮ್ಮಿಶ್ರ ಸರ್ಕಾರ ಪತನವಾಯಿತು. ಇದರ ನಂತರ, ಮಾಜಿ ಸಚಿವ ಅಲ್ತಾಫ್ ಬುಖಾರಿ ನೇತೃತ್ವದಲ್ಲಿ ಅನೇಕ ಪಿಡಿಪಿ ನಾಯಕರು 2020 ರಲ್ಲಿ ಜೆಕೆಎಪಿ ಪಕ್ಷವನ್ನು ರಚಿಸಿದರು ಮತ್ತು ಅಲಿ ಅದರ ಸ್ಥಾಪಕ ಸದಸ್ಯರಲ್ಲಿ ಒಬ್ಬರಾಗಿದ್ದರು. ಅಲಿ ಅವರು ದೆಹಲಿಯಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿದರು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನವನ್ನು ನಡೆಸಲು ದಿನಾಂಕಗಳನ್ನು ಘೋಷಿಸಲಾಗಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು, ಎರಡನೇ ಹಂತ ಸೆಪ್ಟೆಂಬರ್ 25 ರಂದು ಮತ್ತು ಮೂರನೇ ಹಂತದ ಮತದಾನ ಅಕ್ಟೋಬರ್ 1 ರಂದು ನಡೆಯಲಿದೆ. ಇದರೊಂದಿಗೆ ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ.

ಆರ್ಟಿಕಲ್ 370 ರದ್ದಾದ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದು ಎಂಬುದು ಗಮನಾರ್ಹ. ಈ ಹಿಂದೆ 2014ರಲ್ಲಿ ಇಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಈ ಅವಧಿಯಲ್ಲಿ, ಜಮ್ಮು ಮತ್ತು ಕಾಶ್ಮೀರವು ಪೂರ್ಣ ರಾಜ್ಯದ ಸ್ಥಾನಮಾನವನ್ನು ಹೊಂದಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us