AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jharkhand Politics: ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆ.30ರಂದು ಬಿಜೆಪಿಗೆ ಸೇರ್ಪಡೆ

ಜಾರ್ಖಂಡ್​ನ ಮಾಜಿ ಸಿಎಂ ಚಂಪೈ ಸೊರೆನ್ ಶೀಘ್ರ ಬಿಜೆಪಿಗೆ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕೃತ ಮಾಹಿತಿ ನೀಡಿದ್ದಾರೆ.

Jharkhand Politics: ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆ.30ರಂದು ಬಿಜೆಪಿಗೆ ಸೇರ್ಪಡೆ
ಚಂಪೈ ಸೊರೆನ್
ನಯನಾ ರಾಜೀವ್
|

Updated on: Aug 27, 2024 | 8:05 AM

Share

ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್(Champai Soren) ಆಗಸ್ಟ್​ 30ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದು, ಆಗಸ್ಟ್​ 30ರಂದು ಸೊರೆನ್ ಬಿಜೆಪಿಗೆ ಸೇರ್ಪಡೆಯಾಗಲಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಅವರು ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ರಾಜಕೀಯ ನಿವೃತ್ತಿ, ಹೊಸ ಪಕ್ಷ ಕಟ್ಟುವುದು ಅಥವಾ ಇನ್ನೊಂದು ಪಕ್ಷಕ್ಕೆ ಸೇರುವುದು ಎಂಬ ಮೂರು ಆಯ್ಕೆಗಳು ನನ್ನ ಮುಂದಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದರು.

ಆಗಸ್ಟ್​ 21ರಂದು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ನಾನು ಹೊಸ ಸಂಘಟನೆ ಬಲಪಡಿಸುತ್ತೇನೆ ಎಂದಿದ್ದರು. ಜನವರಿ 31ರಂದು ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್​ ಅವರನ್ನು ಬಂಧಿಸಿದ ನಂತರ ಚಂಪೈ ಜಾರ್ಖಂಡ್​ ಮುಖ್ಯಮಮತ್ರಿಯಾಗಿದ್ದರು.

ಮತ್ತಷ್ಟು ಓದಿ: Champai Soren: ಹೊಸ ಪಕ್ಷ ರಚಿಸುವ ಯೋಜನೆ ಪ್ರಕಟಿಸಿದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್

ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ 3 ರಂದು ಅವರು ಹುದ್ದೆಯಿಂದ ಕೆಳಗಿಳಿದಿದ್ದರು.

ನಾನು ಯಾವುದೇ ಹುದ್ದೆಯಲ್ಲಿರಲಿ ಅಥವಾ ಇಲ್ಲದಿರಲಿ, ನಾನು ಯಾವಾಗಲೂ ಸಾರ್ವಜನಿಕರಿಗೆ ಲಭ್ಯವಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸುವೆಡೆಗೆ ಗಮನಹರಿಸುತ್ತೇನೆ ಎಂದಿದ್ದರು. 2024ರಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸರ್ಕಾರವನ್ನು ಮೂಲೆಗುಂಪು ಮಾಡಲು ಬಿಜೆಪಿ ಸಂಪೂರ್ಣ ತಯಾರಿ ನಡೆಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!