AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್ ಸಚಿವ ಚಂಪೈ ಸೊರೆನ್ ಬೆಂಗಾವಲು ವಾಹನ ಅಪಘಾತ, ಓರ್ವ ಸಾವು, ಐವರಿಗೆ ಗಾಯ

ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಹಾಗೂ ಸಚಿವ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

ಜಾರ್ಖಂಡ್ ಸಚಿವ ಚಂಪೈ ಸೊರೆನ್ ಬೆಂಗಾವಲು ವಾಹನ ಅಪಘಾತ, ಓರ್ವ ಸಾವು, ಐವರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Aug 21, 2024 | 12:44 PM

Share

ಸಚಿವ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಎಸ್ಕಾರ್ಟ್​ ಚಾಲಕ ಕಾನ್​​ಸ್ಟೆಬಲ್ ವಿನಯ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಈ ಅಪಘಾತದಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸಚಿವ ಚಂಪೈ ಸೊರೆನ್ ಅವರನ್ನು ಜಿಲ್ಲಿಂಗೋಡದಲ್ಲಿರುವ ಅವರ ನಿವಾಸಕ್ಕೆ ತಲುಪಿಸಿ ಯೋಧರು ಪೊಲೀಸ್ ಹಿಂತಿರುಗುತ್ತಿದ್ದಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬೆಂಗಾವಲು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇತರ ಐವರು ಯೋಧರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ ಸೈನಿಕರಲ್ಲಿ ಮನೋಜ್ ಭಗತ್, ಹರೀಶ್ ಲಗುರಿ, ಸಾವನ್ ಚಂದ್ರ ಹೆಂಬ್ರಾಮ್ ಮತ್ತು ದಯಾಳ್ ಮಹತೋ ಸೇರಿದ್ದಾರೆ.

ಭೀಕರ ಅಪಘಾತದ ಬಳಿಕ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸೆರೈಕೆಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೆಮ್ಶೆಡ್‌ಪುರಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಈ ಭೀಕರ ಅಪಘಾತದಲ್ಲಿ ಬೆಂಗಾವಲು ವಾಹನದ ಚಾಲಕನಾಗಿದ್ದ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ಐವರು ಯೋಧರು ಗಾಯಗೊಂಡಿದ್ದಾರೆ.

ಮುಡಿಯಾ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ