AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯ ಪ್ರಾಚ್ಯದವರನ್ನು ನೋಡಿದರೆ ಭಾರತೀಯರಾಗಿ ನಾವು ಅದೃಷ್ಟವಂತರು: ಶೆಹ್ಲಾ ರಶೀದ್

Shehla Rashid: ಮಧ್ಯಪ್ರಾಚ್ಯದಲ್ಲಿನ ಘಟನೆಗಳನ್ನು ನೋಡಿದಾಗ, ಇಂದು ನಾನು ಭಾರತೀಯರಾಗಿ ನಾವು ಎಷ್ಟು ಅದೃಷ್ಟವಂತರು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ನಮ್ಮ ಸುರಕ್ಷತೆಗಾಗಿ ತಮ್ಮ ಎಲ್ಲವನ್ನೂ ತ್ಯಾಗಮಾಡಿವೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ ಶ್ರೇಯಸ್ಸು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾಗೆ ಸಲ್ಲುತ್ತದೆ ಎಂದು ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ.

ಮಧ್ಯ ಪ್ರಾಚ್ಯದವರನ್ನು ನೋಡಿದರೆ ಭಾರತೀಯರಾಗಿ ನಾವು ಅದೃಷ್ಟವಂತರು: ಶೆಹ್ಲಾ ರಶೀದ್
ಶೀಲಾ ರಶೀದ್
Follow us
ರಶ್ಮಿ ಕಲ್ಲಕಟ್ಟ
|

Updated on:Oct 14, 2023 | 6:17 PM

ದೆಹಲಿ ಅಕ್ಟೋಬರ್ 14: ವರ್ಷಗಳ ಹಿಂದೆ ಪ್ರಧಾನಿ ಮೋದಿ (PM Modi) ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದ ಜೆಎನ್‌ಯು (JNU)  ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ (Shehla Rashid) ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪಿಎಂ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಶ್ಲಾಘಿಸಿದ್ದಾರೆ. ಇಸ್ರೇಲ್‌ನ ಸ್ಥಳಾಂತರಿಸುವ ಆದೇಶವನ್ನು ಅನುಸರಿಸಿ ನೂರಾರು ಮತ್ತು ಸಾವಿರಾರು ಗಾಜಾ ಜನರು ಪಲಾಯನ ಮಾಡಲು ಪ್ರಾರಂಭಿಸಿರುವುದರಿಂದ ಶನಿವಾರ ಎಂಟನೇ ದಿನಕ್ಕೆ ಪ್ರವೇಶಿಸಿದ ಇಸ್ರೇಲ್-ಹಮಾಸ್ ಸಂಘರ್ಷವು ಒಂದು ಪ್ರಮುಖ ಮಾನವೀಯ ಬಿಕ್ಕಟ್ಟಾಗಿ ಪರಿವರ್ತನೆಗೊಂಡಿರುವ ಹೊತ್ತಲ್ಲಿ  ಪ್ರಶಂಸೆ ವ್ಯಕ್ತವಾಗಿದೆ.

ಮಧ್ಯಪ್ರಾಚ್ಯದಲ್ಲಿನ ಘಟನೆಗಳನ್ನು ನೋಡಿದಾಗ, ಇಂದು ನಾನು ಭಾರತೀಯರಾಗಿ ನಾವು ಎಷ್ಟು ಅದೃಷ್ಟವಂತರು ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳು ನಮ್ಮ ಸುರಕ್ಷತೆಗಾಗಿ ತಮ್ಮ ಎಲ್ಲವನ್ನೂ ತ್ಯಾಗಮಾಡಿವೆ. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದ ಶ್ರೇಯಸ್ಸು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ , ಎಡಿಜಿಪಿಐ, ಭಾರತೀಯ ಸೇನೆಯ ಚೀನಾರ್ ಕಾರ್ಪ್ಸ್ ಗೆ ಸಲ್ಲುತ್ತದೆ ಎಂದು ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ನೋಡುತ್ತಿದ್ದರೆ, ಭದ್ರತೆಯಿಲ್ಲದೆ ಶಾಂತಿ ಅಸಾಧ್ಯ ಎಂಬುದು ಗೊತ್ತಾಗುತ್ತದೆ . ಭಾರತೀಯ ಸೇನೆ ಚಿನಾರ್ ಕಾರ್ಪ್ಸ್ ಜೊತೆಗೆ ಸಿಆರ್ ಪಿಎಫ್ ,ತ್ತು ಜಮ್ಮು ಕಾಶ್ಮೀರ ಪೋಲೀಸ್ ನ ಕೆಚ್ಚೆದೆಯ ಸಿಬ್ಬಂದಿ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಪಾರ ತ್ಯಾಗ ಮಾಡಿದ್ದಾರೆ ಎಂದು ಮಾಜಿ ವಿದ್ಯಾರ್ಥಿ ನಾಯುಕಿ ಟ್ವೀಟ್ ಮಾಡಿದ್ದಾರೆ.

ಶೆಹ್ಲಾ ರಶೀದ್ 2016 ರಲ್ಲಿ ಮೊದಲ ಬಾರಿಗೆ ಸುದ್ದಿಗೆ ಬಂದಿದ್ದು, ಈಗ ಕಾಂಗ್ರೆಸ್ ನಾಯಕರಾಗಿರುವ ಕನ್ಹಯ್ಯಾ ಕುಮಾರ್ ಮತ್ತು ಉಮರ್ ಖಾಲಿದ್ ಅವರೊಂದಿಗೆ ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಬ್ರಾಂಡ್ ಆಗಿದ್ದರು.

2019 ರಲ್ಲಿ, ಶೆಹ್ಲಾ ರಶೀದ್ ಅವರು ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳು ಮನೆಗಳನ್ನು ಧ್ವಂಸ ಮಾಡಿ ಭಯದ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಮಾಡಿದ ಟ್ವೀಟ್‌ಗಾಗಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: PM Modi: ಪ್ರತಿಯೊಬ್ಬರೂ ಪಾರ್ವತಿ ಕುಂಡ, ಜಗೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಬೇಕು, ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡ ಪ್ರಧಾನಿ ಮೋದಿ

ಈ ವರ್ಷದ ಆಗಸ್ಟ್‌ನಲ್ಲಿ, ಶೆಹ್ಲಾ ರಶೀದ್ ಅವರು ಆರ್ಟಿಕಲ್ 370 ರ ರದ್ದತಿಯ ವಿರುದ್ಧದ ಅರ್ಜಿದಾರರ ಪಟ್ಟಿಯಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡರು. “ಇದನ್ನು ಒಪ್ಪಿಕೊಳ್ಳುವುದು ಅನಾನುಕೂಲವಾಗಿದ್ದರೂ, ನರೇಂದ್ರ ಮೋದಿ ಸರ್ಕಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಎಲ್ ಜಿ ಆಡಳಿತದಲ್ಲಿ ಕಾಶ್ಮೀರದಲ್ಲಿ ಮಾನವ ಹಕ್ಕುಗಳು ಸುಧಾರಿಸಿದೆ. ಸಂಪೂರ್ಣವಾಗಿ ಪ್ರಯೋಜನಕಾರಿ ಕೆಲಸದ ಮೂಲ , ಸರ್ಕಾರದ ಸ್ಪಷ್ಟ ನಿಲುವು ಒಟ್ಟಾರೆ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ಅದು ನನ್ನ ದೃಷ್ಟಿಕೋನ” ಎಂದು ಶೆಹ್ಲಾ ರಶೀದ್ ಹೇಳಿದ್ದಾರೆ.

ಅರ್ಜಿಯಿಂದ ತನ್ನ ಹೆಸರನ್ನು ಹಿಂತೆಗೆದುಕೊಂಡ ಇನ್ನೊಬ್ಬ ಪ್ರಮುಖ ವ್ಯಕ್ತಿ ಶಾ ಫೈಸಲ್ ಅವರು 2019 ರಲ್ಲಿ ರಾಜಕೀಯ ಸೇರಲು ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದರು ನಂತರ ತಮ್ಮದೇ ಆದ ಪಕ್ಷವನ್ನು ರಚಿಸಿದರು.. ರಾಜಕೀಯದಲ್ಲಿ ಶೆಹ್ಲಾ ರಶೀದ್, ಶಾ ಫೈಸಲ್ ಪಶ್ರದಲ್ಲಿದ್ದರು.. ಮೂರು ವರ್ಷಗಳ ನಂತರ, ಶಾ ಫೈಸಲ್ ಅವರ ರಾಜೀನಾಮೆ ಅಂಗೀಕಾರವಾಗದ ಕಾರಣ ಸರ್ಕಾರಿ ಸೇವೆಗೆ ಮರಳಿದರು. ಅದೇ ವರ್ಷ ಇಬ್ಬರೂ ಸುಪ್ರೀಂ ಕೋರ್ಟ್ ಅರ್ಜಿಯಿಂದ ಹೆಸರನ್ನು ಹಿಂತೆಗೆದುಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Sat, 14 October 23

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ