AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?
ಪ್ರಕಾಶ್ ಜಾವಡೇಕರ್​ ಮತ್ತು ರವಿಶಂಕರ್ ಪ್ರಸಾದ್​
TV9 Web
| Edited By: |

Updated on: Jul 11, 2021 | 4:59 PM

Share

ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜೀನಾಮೆ ನೀಡಿರುವ ರವಿಶಂಕರ್ ಪ್ರಸಾದ್​ ಮತ್ತು ಪ್ರಕಾಶ್​ ಜಾವಡೇಕರ್​ ಶೀಘ್ರದಲ್ಲೇ ಪಕ್ಷದೊಳಗಿನ ಮಹತ್ವದ ಹುದ್ದೆಗಳನ್ನು ಪಡೆಯಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಇದರಲ್ಲಿ ಪ್ರಕಾಶ್​ ಜಾವಡೇಕರ್​ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಚಿವರಾಗಿದ್ದರು ಮತ್ತು ರವಿಶಂಕರ್​ ಪ್ರಸಾದ್ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿದ್ದರು. ಜು.7ರಂದು ನಡೆದ ಕ್ಯಾಬಿನೆಟ್​ ಮರುರಚನೆ ವೇಳೆ ಇವರಿಬ್ಬರೂ ಸೇರಿ ಒಟ್ಟು 12 ಮಂದಿ ರಾಜೀನಾಮೆ ನೀಡಿದ್ದರು. ಇಂಥ ದಿಗ್ಗಜ ಸಚಿವರುಗಳೇ ರಾಜೀನಾಮೆ ನೀಡಿದ್ದು ಅಚ್ಚರಿ ಹುಟ್ಟಿಸಿತ್ತು.

ಇದೀಗ ಬಿಜೆಪಿ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ, ರವಿಶಂಕರ್​ ಪ್ರಸಾದ್ ಹಾಗೂ ಪ್ರಕಾಶ್​ ಜಾವಡೇಕರ್ ಇಬ್ಬರೂ ಪಕ್ಷದಲ್ಲಿ ಮಹತ್ವದ ಸಾಂಸ್ಥಿಕ ಹುದ್ದೆಗಳನ್ನು ಪಡೆಯಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ಉಪಾಧ್ಯಕ್ಷ ಸ್ಥಾನಗಳು ಸಿಗಬಹುದು..ಅದರೊಂದಿಗೆ ಮುಂದಿನ ವರ್ಷ ಚುನಾವಣೆ ನಡೆಯುಲಿರುವ ರಾಜ್ಯಗಳ ಉಸ್ತುವಾರಿಯೂ ಇವರ ಹೆಗಲಿಗೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶೀಘ್ರವೇ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ. ಇವರಿಬ್ಬರೂ ಪಕ್ಷದಲ್ಲಿ ಹಿರಿಯರಾಗಿದ್ದು, ಮುಂದೇನು ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ.

ಇದನ್ನೂ ಓದಿ: ಯುರೋಪ್​ನಲ್ಲಿ ಕಾಂಗ್ರೆಸ್ ಘಟಕಗಳಿಗೆ ಅಧ್ಯಕ್ಷರ ಆಯ್ಕೆ; ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಲ್ಲಿದ್ದಾರೆ ಬಿಯರ್ ಉದ್ಯಮಿಗಳು, ವಿಜ್ಞಾನಿಗಳು

ಕೇಂದ್ರಮಂತ್ರಿಯಾಗುತ್ತಿದ್ದಂತೆ ಮಧ್ಯಪ್ರದೇಶಕ್ಕೆ ಭರ್ಜರಿ ಗುಡ್ ನ್ಯೂಸ್ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ..!

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ