AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?
ಪ್ರಕಾಶ್ ಜಾವಡೇಕರ್​ ಮತ್ತು ರವಿಶಂಕರ್ ಪ್ರಸಾದ್​
TV9 Web
| Edited By: |

Updated on: Jul 11, 2021 | 4:59 PM

Share

ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜೀನಾಮೆ ನೀಡಿರುವ ರವಿಶಂಕರ್ ಪ್ರಸಾದ್​ ಮತ್ತು ಪ್ರಕಾಶ್​ ಜಾವಡೇಕರ್​ ಶೀಘ್ರದಲ್ಲೇ ಪಕ್ಷದೊಳಗಿನ ಮಹತ್ವದ ಹುದ್ದೆಗಳನ್ನು ಪಡೆಯಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಇದರಲ್ಲಿ ಪ್ರಕಾಶ್​ ಜಾವಡೇಕರ್​ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಚಿವರಾಗಿದ್ದರು ಮತ್ತು ರವಿಶಂಕರ್​ ಪ್ರಸಾದ್ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿದ್ದರು. ಜು.7ರಂದು ನಡೆದ ಕ್ಯಾಬಿನೆಟ್​ ಮರುರಚನೆ ವೇಳೆ ಇವರಿಬ್ಬರೂ ಸೇರಿ ಒಟ್ಟು 12 ಮಂದಿ ರಾಜೀನಾಮೆ ನೀಡಿದ್ದರು. ಇಂಥ ದಿಗ್ಗಜ ಸಚಿವರುಗಳೇ ರಾಜೀನಾಮೆ ನೀಡಿದ್ದು ಅಚ್ಚರಿ ಹುಟ್ಟಿಸಿತ್ತು.

ಇದೀಗ ಬಿಜೆಪಿ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ, ರವಿಶಂಕರ್​ ಪ್ರಸಾದ್ ಹಾಗೂ ಪ್ರಕಾಶ್​ ಜಾವಡೇಕರ್ ಇಬ್ಬರೂ ಪಕ್ಷದಲ್ಲಿ ಮಹತ್ವದ ಸಾಂಸ್ಥಿಕ ಹುದ್ದೆಗಳನ್ನು ಪಡೆಯಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ಉಪಾಧ್ಯಕ್ಷ ಸ್ಥಾನಗಳು ಸಿಗಬಹುದು..ಅದರೊಂದಿಗೆ ಮುಂದಿನ ವರ್ಷ ಚುನಾವಣೆ ನಡೆಯುಲಿರುವ ರಾಜ್ಯಗಳ ಉಸ್ತುವಾರಿಯೂ ಇವರ ಹೆಗಲಿಗೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶೀಘ್ರವೇ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ. ಇವರಿಬ್ಬರೂ ಪಕ್ಷದಲ್ಲಿ ಹಿರಿಯರಾಗಿದ್ದು, ಮುಂದೇನು ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ.

ಇದನ್ನೂ ಓದಿ: ಯುರೋಪ್​ನಲ್ಲಿ ಕಾಂಗ್ರೆಸ್ ಘಟಕಗಳಿಗೆ ಅಧ್ಯಕ್ಷರ ಆಯ್ಕೆ; ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಲ್ಲಿದ್ದಾರೆ ಬಿಯರ್ ಉದ್ಯಮಿಗಳು, ವಿಜ್ಞಾನಿಗಳು

ಕೇಂದ್ರಮಂತ್ರಿಯಾಗುತ್ತಿದ್ದಂತೆ ಮಧ್ಯಪ್ರದೇಶಕ್ಕೆ ಭರ್ಜರಿ ಗುಡ್ ನ್ಯೂಸ್ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ..!

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !