AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ.

ಪ್ರಕಾಶ್​ ಜಾವಡೇಕರ್​, ರವಿಶಂಕರ್​ ಪ್ರಸಾದ್​ಗೆ ಶೀಘ್ರದಲ್ಲೇ ಸಿಗಲಿದೆ ಹೊಸ ಹುದ್ದೆ; ಜೆ.ಪಿ.ನಡ್ಡಾರಿಂದ ಘೋಷಣೆ?
ಪ್ರಕಾಶ್ ಜಾವಡೇಕರ್​ ಮತ್ತು ರವಿಶಂಕರ್ ಪ್ರಸಾದ್​
TV9 Web
| Edited By: |

Updated on: Jul 11, 2021 | 4:59 PM

Share

ಇತ್ತೀಚೆಗೆ ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವೇಳೆ ರಾಜೀನಾಮೆ ನೀಡಿರುವ ರವಿಶಂಕರ್ ಪ್ರಸಾದ್​ ಮತ್ತು ಪ್ರಕಾಶ್​ ಜಾವಡೇಕರ್​ ಶೀಘ್ರದಲ್ಲೇ ಪಕ್ಷದೊಳಗಿನ ಮಹತ್ವದ ಹುದ್ದೆಗಳನ್ನು ಪಡೆಯಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಇದರಲ್ಲಿ ಪ್ರಕಾಶ್​ ಜಾವಡೇಕರ್​ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಚಿವರಾಗಿದ್ದರು ಮತ್ತು ರವಿಶಂಕರ್​ ಪ್ರಸಾದ್ ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವರಾಗಿದ್ದರು. ಜು.7ರಂದು ನಡೆದ ಕ್ಯಾಬಿನೆಟ್​ ಮರುರಚನೆ ವೇಳೆ ಇವರಿಬ್ಬರೂ ಸೇರಿ ಒಟ್ಟು 12 ಮಂದಿ ರಾಜೀನಾಮೆ ನೀಡಿದ್ದರು. ಇಂಥ ದಿಗ್ಗಜ ಸಚಿವರುಗಳೇ ರಾಜೀನಾಮೆ ನೀಡಿದ್ದು ಅಚ್ಚರಿ ಹುಟ್ಟಿಸಿತ್ತು.

ಇದೀಗ ಬಿಜೆಪಿ ಮೂಲಗಳಿಂದ ತಿಳಿದುಬಂದಿರುವ ಮಾಹಿತಿ ಪ್ರಕಾರ, ರವಿಶಂಕರ್​ ಪ್ರಸಾದ್ ಹಾಗೂ ಪ್ರಕಾಶ್​ ಜಾವಡೇಕರ್ ಇಬ್ಬರೂ ಪಕ್ಷದಲ್ಲಿ ಮಹತ್ವದ ಸಾಂಸ್ಥಿಕ ಹುದ್ದೆಗಳನ್ನು ಪಡೆಯಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಥವಾ ಉಪಾಧ್ಯಕ್ಷ ಸ್ಥಾನಗಳು ಸಿಗಬಹುದು..ಅದರೊಂದಿಗೆ ಮುಂದಿನ ವರ್ಷ ಚುನಾವಣೆ ನಡೆಯುಲಿರುವ ರಾಜ್ಯಗಳ ಉಸ್ತುವಾರಿಯೂ ಇವರ ಹೆಗಲಿಗೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶೀಘ್ರವೇ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಜು.7ರಂದು ಒಟ್ಟು 43 ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಮೊದಲಿದ್ದ 12 ಮಂದಿ ರಾಜೀನಾಮೆ ನೀಡಿದ್ದರು. ಅಲ್ಲೀಗ ಪ್ರಕಾಶ್​ ಜಾವಡೇಕರ್​ ಜಾಗಕ್ಕೆ ಅನುರಾಗ್ ಠಾಕೂರ್ ಬಂದಿದ್ದರೆ, ರವಿಶಂಕರ್​ ಪ್ರಸಾದ್​ ಬದಲಿಗೆ ಅಶ್ವಿನಿ ವೈಷ್ಣವ್​ ಬಂದಿದ್ದಾರೆ. ಇವರಿಬ್ಬರೂ ಪಕ್ಷದಲ್ಲಿ ಹಿರಿಯರಾಗಿದ್ದು, ಮುಂದೇನು ಎಂಬ ಪ್ರಶ್ನೆ ಸಹಜವಾಗಿಯೇ ಎದ್ದಿದೆ.

ಇದನ್ನೂ ಓದಿ: ಯುರೋಪ್​ನಲ್ಲಿ ಕಾಂಗ್ರೆಸ್ ಘಟಕಗಳಿಗೆ ಅಧ್ಯಕ್ಷರ ಆಯ್ಕೆ; ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದವರಲ್ಲಿದ್ದಾರೆ ಬಿಯರ್ ಉದ್ಯಮಿಗಳು, ವಿಜ್ಞಾನಿಗಳು

ಕೇಂದ್ರಮಂತ್ರಿಯಾಗುತ್ತಿದ್ದಂತೆ ಮಧ್ಯಪ್ರದೇಶಕ್ಕೆ ಭರ್ಜರಿ ಗುಡ್ ನ್ಯೂಸ್ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ..!

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ