AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ಶೂ ಲೇಸ್ ಕಟ್ಟಿದ್ರಾ ಮಾಜಿ ಸಚಿವ ಜಿತೇಂದ್ರ ಸಿಂಗ್, ಬಿಜೆಪಿ ಟೀಕೆಗೆ ಸಿಂಗ್ ಹೇಳಿದ್ದಿಷ್ಟು

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ (Bharat Jodo Yatra) ಮುಂದಿನ ಚುನಾವಣೆಗೆ ಸಹಾಯ ಮಾಡುವ ಬದಲು ವಿವಾದಗಳ ವೇದಿಕೆಯಾಗಿ ಮಾರ್ಪಾಡಾಗುತ್ತಿದೆ.

ರಾಹುಲ್ ಗಾಂಧಿಯ ಶೂ ಲೇಸ್ ಕಟ್ಟಿದ್ರಾ ಮಾಜಿ ಸಚಿವ ಜಿತೇಂದ್ರ ಸಿಂಗ್, ಬಿಜೆಪಿ ಟೀಕೆಗೆ ಸಿಂಗ್ ಹೇಳಿದ್ದಿಷ್ಟು
Rahul GandhiImage Credit source: DNA
TV9 Web
| Edited By: |

Updated on: Dec 22, 2022 | 7:24 AM

Share

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ (Bharat Jodo Yatra) ಮುಂದಿನ ಚುನಾವಣೆಗೆ ಸಹಾಯ ಮಾಡುವ ಬದಲು ವಿವಾದಗಳ ವೇದಿಕೆಯಾಗಿ ಮಾರ್ಪಾಡಾಗುತ್ತಿದೆ. ಭಾರತ್ ಜೋಡೋ ಯಾತ್ರೆ ವೇಳೆ ಕೇಂದ್ರದ ಮಾಜಿ ಸಚಿವರೊಬ್ಬರು ರಾಹುಲ್ ಗಾಂಧಿ ಶೂ ಲೇಸ್​ ಕಟ್ಟುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ. ಈ ಕುರಿತು ಬಿಜೆಪಿಯ ಅಮಿತ್ ಮಾಳವೀಯ ಟೀಕೆ ಮಾಡಿದ್ದು, ಕಾಂಗ್ರೆಸ್ಸಿಗೆ ತೀವ್ರ ಮುಜುಗರ ಉಂಟಾಗಿದೆ.

ಅಮಿತ್ ಮಾಳವೀಯ ಅವರು ಹಂಚಿಕೊಂಡ ವಿಡಿಯೋ ಒಂದರಲ್ಲಿ ಮಾಜಿ ಸಚಿವ ಜಿತೇಂದ್ರ ಸಿಂಗ್ ಅಹಿರ್ವಾರ್ ರಾಹುಲ್ ಗಾಂಧಿ ಎದುರು ಮಂಡಿಯೂರಿ ಕುಳಿತಿರುವುದನ್ನು ಕಾಣಬಹುದು.

ಇದಕ್ಕೆ ಪ್ರತ್ಯುತ್ತರ ನೀಡಿದ ಜಿತೇಂದ್ರ ಸಿಂಗ್ ಅವರು, ನಾನು ನನ್ನ ಶೂ ಲೇಸ್​ ಕಟ್ಟಿಕೊಳ್ಳುತ್ತಿದ್ದೆ ರಾಹುಲ್ ಗಾಂಧಿಯವರದ್ದಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ:ಕೋವಿಡ್ ನಿಯಮ ಪಾಲಿಸಿ ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರ ಪತ್ರ

ಬಿಜೆಪಿ ಮಾಡಿರುವ ಟ್ವೀಟ್ ಸಂಪೂರ್ಣ ಸುಳ್ಳು, ಪಾದಯಾತ್ರೆ ಸಮಯದಲ್ಲಿ ನನ್ನ ಶೂ ಲೇಸ್​ ಕಳಚಿತ್ತು ಹಾಗಾಗಿ ನೀವು ಶೂ ಲೇಸ್ ಕಟ್ಟಿಕೊಳ್ಳಿ ಎಂದು ಸ್ವಲ್ಪ ಸಮಯ ರಾಹುಲ್ ಅಲ್ಲೇ ನಿಂತಿದ್ದರಷ್ಟೇ ಎಂದರು.

ಟ್ವೀಟ್​ ಅನ್ನು ಡಿಲೀಟ್ ಮಾಡಿ ಕ್ಷಮೆಯಾಚಿಸಿ ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ.

ಭಾರತ್ ಜೋಡೋ ಯಾತ್ರೆ ಬುಧವಾರ ರಾಜಸ್ಥಾನದಿಂದ ಹರಿಯಾಣಕ್ಕೆ ಪ್ರವೇಶ ಪಡೆದಿದೆ. ಈ ವೇಳೆ ಭನ್ವರ್ ಜಿತೇಂದ್ರ ಸಿಂಗ್ ಕೂಡ ರಾಹುಲ್ ಗಾಂಧಿ ಜೊತೆಗೆ ಪಕ್ಷದ ಇತರ ನಾಯಕರೊಂದಿಗೆ ಪಾದಯಾತ್ರೆ ಮಾಡುತ್ತಿದ್ದರು.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಅವರ ಮಾಜಿ ಉಪ ಸಚಿನ್ ಪೈಲಟ್ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಸಾರಾ ಅವರು ಶ್ರೀ ಗಾಂಧಿಯವರೊಂದಿಗೆ ಬಿಜೆಪಿ ಆಡಳಿತವಿರುವ ಹರಿಯಾಣಕ್ಕೆ ಕಾಲಿಟ್ಟರು. ರಾಜ್ಯದ ಗಡಿಯುದ್ದಕ್ಕೂ ಯಾತ್ರೆಯನ್ನು ಹರಿಯಾಣದ ವಿರೋಧ ಪಕ್ಷದ ನಾಯಕ ಭೂಪಿಂದರ್ ಸಿಂಗ್ ಹೂಡಾ, ರಣದೀಪ್ ಸಿಂಗ್ ಸುರ್ಜೆವಾಲಾ, ಕುಮಾರಿ ಸೆಲ್ಜಾ ಮತ್ತು ದೀಪೇಂದರ್ ಸಿಂಗ್ ಹೂಡಾ ಸ್ವಾಗತಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ