AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ […]

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?
KUSHAL V
|

Updated on: Oct 18, 2020 | 6:53 PM

Share

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ ನಾಥ್​ ನಾನೇಕೆ ಆಕೆಯ ಹೆಸರು ಹೇಳಲಿ. ನನಗಿಂತ ನಿಮಗೇ ಆಕೆಯ ಹೆಸರು ಚಿರಪರಿಚಿತ. ನೀವು ನನಗೆ ಮೊದಲೇ ಎಚ್ಚರಿಸಬೇಕಿತ್ತು. ಏನ್​ ಐಟಂ ಇವಳು ಎಂದು ಡೈಲಾಗ್ ಹೊಡೆದುಬಿಟ್ಟರು. ಇದೀಗ, ಮಾಜಿ ಸಿಎಂರ ಹೇಳಿಕೆ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಅಂದ ಹಾಗೆ, ಇಮರ್ತಿ ದೇವಿ ಹಾಗೂ ಕಮಲ್​ ನಾಥ್​ ನಡುವೆ ಹಳೇ ರಾಜಕೀಯ ದ್ವೇಷವಿದೆಯಂತೆ. ಇಮರ್ತಿ ದೇವಿ ಈ ಹಿಂದೆ ಕಾಂಗ್ರೆಸ್​ನಲ್ಲಿದ್ದಾಗ ಕಮಲ್​ ನಾಥ್​ ವಿರುದ್ಧ ಲಂಚದ ಆರೋಪ ಮಾಡಿದ್ದರು. ಕಮಲ್​ ನಾಥ್​ ಸಿಎಂ ಆಗಿದ್ದಾಗ ಅವರ ಮಂತ್ರಿಮಂಡಲದಲ್ಲಿ ಸೇರ್ಪಡೆಯಾಗದ MLAಗಳಿಗೆ ಪ್ರತಿ ತಿಂಗಳು ಐದು ಲಕ್ಷ ರೂಪಾಯಿ ಹಣ ಕೊಡುತ್ತಾರೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಕಮಲ್ ನಾಥ್​ ಆಕೆ ತನ್ನ ತಪ್ಪುಗಳನ್ನು ಮುಚ್ಚಿಡಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಇಮರ್ತಿ ದೇವಿಯೇ ಈ ಹಿಂದೆ ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇದೀಗ, ನನ್ನ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದರು.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!