AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ […]

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?
KUSHAL V
|

Updated on: Oct 18, 2020 | 6:53 PM

Share

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ ನಾಥ್​ ನಾನೇಕೆ ಆಕೆಯ ಹೆಸರು ಹೇಳಲಿ. ನನಗಿಂತ ನಿಮಗೇ ಆಕೆಯ ಹೆಸರು ಚಿರಪರಿಚಿತ. ನೀವು ನನಗೆ ಮೊದಲೇ ಎಚ್ಚರಿಸಬೇಕಿತ್ತು. ಏನ್​ ಐಟಂ ಇವಳು ಎಂದು ಡೈಲಾಗ್ ಹೊಡೆದುಬಿಟ್ಟರು. ಇದೀಗ, ಮಾಜಿ ಸಿಎಂರ ಹೇಳಿಕೆ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಅಂದ ಹಾಗೆ, ಇಮರ್ತಿ ದೇವಿ ಹಾಗೂ ಕಮಲ್​ ನಾಥ್​ ನಡುವೆ ಹಳೇ ರಾಜಕೀಯ ದ್ವೇಷವಿದೆಯಂತೆ. ಇಮರ್ತಿ ದೇವಿ ಈ ಹಿಂದೆ ಕಾಂಗ್ರೆಸ್​ನಲ್ಲಿದ್ದಾಗ ಕಮಲ್​ ನಾಥ್​ ವಿರುದ್ಧ ಲಂಚದ ಆರೋಪ ಮಾಡಿದ್ದರು. ಕಮಲ್​ ನಾಥ್​ ಸಿಎಂ ಆಗಿದ್ದಾಗ ಅವರ ಮಂತ್ರಿಮಂಡಲದಲ್ಲಿ ಸೇರ್ಪಡೆಯಾಗದ MLAಗಳಿಗೆ ಪ್ರತಿ ತಿಂಗಳು ಐದು ಲಕ್ಷ ರೂಪಾಯಿ ಹಣ ಕೊಡುತ್ತಾರೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಕಮಲ್ ನಾಥ್​ ಆಕೆ ತನ್ನ ತಪ್ಪುಗಳನ್ನು ಮುಚ್ಚಿಡಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಇಮರ್ತಿ ದೇವಿಯೇ ಈ ಹಿಂದೆ ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇದೀಗ, ನನ್ನ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದರು.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ