Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ […]

ಏನ್ ‘ಐಟಂ’ ಇವಳು -ಬಿಜೆಪಿ ಅಭ್ಯರ್ಥಿ ಬಗ್ಗೆ ಮಾಜಿ ಸಿಎಂ ಕಮಲ್​ ನಾಥ್​ ಹೀಗೇಕೆ ಹೇಳಿದರು?
Follow us
KUSHAL V
|

Updated on: Oct 18, 2020 | 6:53 PM

ಭೋಪಾಲ್​: ಮಧ್ಯಪ್ರದೇಶದ ಡಾಬ್ರಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಅಂಗವಾಗಿ ಇಂದು ಪ್ರಚಾರ ನಡೆಸಿದ ರಾಜ್ಯದ ಮಾಜಿ ಸಿಎಂ ಕಮಲ್​ ನಾಥ್​ ಬಿಜೆಪಿ ಅಭ್ಯರ್ಥಿ ಇಮರ್ತಿ ದೇವಿಯವರನ್ನು ಲೇವಡಿ ಮಾಡಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಉಪಚುನಾವಣಾ ಪ್ರಚಾರದಲ್ಲಿ ತಮ್ಮ ಅಭ್ಯರ್ಥಿಯ ಪರ ಮತಯಾಚಿಸುತ್ತಿದ್ದ ಕಮಲ್​ ನಾಥ್​ ಸುರೇಶ್​ ನಮ್ಮ ಅಭ್ಯರ್ಥಿ. ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವವರು. ಆಕೆಯ ಹಾಗೆ ಅಲ್ಲ. ಏನು ಆಕೆಯ(ಇಮರ್ತಿ ದೇವಿ) ಹೆಸರು? ಎಂದು ಪ್ರಶ್ನಿಸಿದರು. ಅಲ್ಲಿ ನೆರೆದಿದ್ದ ಜನರು ಇಮರ್ತಿಯ ಹೆಸರು ಹೇಳುತ್ತಿದ್ದಂತೆ ಕಮಲ್​ ನಾಥ್​ ನಾನೇಕೆ ಆಕೆಯ ಹೆಸರು ಹೇಳಲಿ. ನನಗಿಂತ ನಿಮಗೇ ಆಕೆಯ ಹೆಸರು ಚಿರಪರಿಚಿತ. ನೀವು ನನಗೆ ಮೊದಲೇ ಎಚ್ಚರಿಸಬೇಕಿತ್ತು. ಏನ್​ ಐಟಂ ಇವಳು ಎಂದು ಡೈಲಾಗ್ ಹೊಡೆದುಬಿಟ್ಟರು. ಇದೀಗ, ಮಾಜಿ ಸಿಎಂರ ಹೇಳಿಕೆ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಅಂದ ಹಾಗೆ, ಇಮರ್ತಿ ದೇವಿ ಹಾಗೂ ಕಮಲ್​ ನಾಥ್​ ನಡುವೆ ಹಳೇ ರಾಜಕೀಯ ದ್ವೇಷವಿದೆಯಂತೆ. ಇಮರ್ತಿ ದೇವಿ ಈ ಹಿಂದೆ ಕಾಂಗ್ರೆಸ್​ನಲ್ಲಿದ್ದಾಗ ಕಮಲ್​ ನಾಥ್​ ವಿರುದ್ಧ ಲಂಚದ ಆರೋಪ ಮಾಡಿದ್ದರು. ಕಮಲ್​ ನಾಥ್​ ಸಿಎಂ ಆಗಿದ್ದಾಗ ಅವರ ಮಂತ್ರಿಮಂಡಲದಲ್ಲಿ ಸೇರ್ಪಡೆಯಾಗದ MLAಗಳಿಗೆ ಪ್ರತಿ ತಿಂಗಳು ಐದು ಲಕ್ಷ ರೂಪಾಯಿ ಹಣ ಕೊಡುತ್ತಾರೆ ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಕಮಲ್ ನಾಥ್​ ಆಕೆ ತನ್ನ ತಪ್ಪುಗಳನ್ನು ಮುಚ್ಚಿಡಲು ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಇಮರ್ತಿ ದೇವಿಯೇ ಈ ಹಿಂದೆ ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇದೀಗ, ನನ್ನ ಮೇಲೆ ಆರೋಪ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದರು.

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್