DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​ Edited By:

Updated on: Jun 29, 2020 | 2:52 PM

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us