AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vanraj Andekar: ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನ ಗುಂಡಿಕ್ಕಿ ಹತ್ಯೆ

ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪುಣೆ ಪೊಲೀಸರ ಪ್ರಕಾರ, ಆತನ ಮೇಲೆ ಹರಿತವಾದ ಆಯುಧಗಳಿಂದ ಕೂಡ ದಾಳಿ ನಡೆಸಲಾಗಿದೆ. ನಗರದ ನಾನಾ ಪೇಠ ಪ್ರದೇಶದಲ್ಲಿ ಮಾಜಿ ಕೌನ್ಸಿಲರ್‌ನನ್ನು ಹತ್ಯೆ ಮಾಡಲಾಗಿದೆ.

Vanraj Andekar: ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನ ಗುಂಡಿಕ್ಕಿ ಹತ್ಯೆ
ವನರಾಜ್​Image Credit source: ABP Live
ನಯನಾ ರಾಜೀವ್
|

Updated on:Sep 02, 2024 | 11:24 AM

Share

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಒಂದೆಡೆ ಸಿದ್ಧತೆ ನಡೆಯುತ್ತಿದೆ, ಮತ್ತೊಂದೆಡೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪುಣೆ ಪೊಲೀಸರ ಪ್ರಕಾರ, ಆತನ ಮೇಲೆ ಹರಿತವಾದ ಆಯುಧಗಳಿಂದ ಕೂಡ ದಾಳಿ ನಡೆಸಲಾಗಿದೆ. ನಗರದ ನಾನಾ ಪೇಠ ಪ್ರದೇಶದಲ್ಲಿ ಮಾಜಿ ಕೌನ್ಸಿಲರ್‌ನನ್ನು ಹತ್ಯೆ ಮಾಡಲಾಗಿದೆ. ರಾತ್ರಿ 9.30ರ ಸುಮಾರಿಗೆ ತಮ್ಮ ಸಂಬಂಧಿಯೊಂದಿಗೆ ಇಮಾಂದಾರ್ ಚೌಕದಲ್ಲಿ ನಿಂತಿದ್ದರು. ಆಗ ಅವರ ಮೇಲೆ ದಾಳಿ ನಡೆದಿದೆ.

ಕ್ರೈಂ ಬ್ರಾಂಚ್ ಮತ್ತು ಇತರ ವಲಯದ ತಂಡಗಳು ವನರಾಜ್ ಅಂದೇಕರ್ ​​ಅವರನ್ನು ಪತ್ತೆ ಹಚ್ಚಿ ಬಂಧಿಸುವ ಮುನ್ನವೇ ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Shocking Video: ಕುಡಿದ ಮತ್ತಿನಲ್ಲಿ ಅಣ್ಣನನ್ನು ಕೊಂದು ಮನೆಯೊಳಗೇ ಹೂತಿಟ್ಟ ತಮ್ಮ; ಶಾಕಿಂಗ್ ವಿಡಿಯೋ ಇಲ್ಲಿದೆ

ದಾಳಿಕೋರರು ಮೊದಲು ಮಾಜಿ ಕೌನ್ಸಿಲರ್ ವನರಾಜ್ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿದ್ದಾರೆ. ವನರಾಜ್ ಅಂದೇಕರ್ ​​ರಕ್ತದಲ್ಲಿ ತೊಯ್ದು ಬಿದ್ದಿದ್ದಾಗ ದಾಳಿಕೋರರು ಅಲ್ಲಿಂದ ಓಡಿ ಹೋಗಿದ್ದಾರೆ.

ವನರಾಜ್ ಅಂದೇಕರ್ ​​ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಸದ್ಯ ಪೊಲೀಸರು ಈ ಬಗ್ಗೆ ತನಿಖೆಯಲ್ಲಿ ನಿರತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಕೌಟುಂಬಿಕ ಕಲಹ ಹಾಗೂ ಹಣದ ಕಾರಣದಿಂದ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಮೂವರ ವಿಚಾರಣೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Mon, 2 September 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು