AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vanraj Andekar: ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನ ಗುಂಡಿಕ್ಕಿ ಹತ್ಯೆ

ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪುಣೆ ಪೊಲೀಸರ ಪ್ರಕಾರ, ಆತನ ಮೇಲೆ ಹರಿತವಾದ ಆಯುಧಗಳಿಂದ ಕೂಡ ದಾಳಿ ನಡೆಸಲಾಗಿದೆ. ನಗರದ ನಾನಾ ಪೇಠ ಪ್ರದೇಶದಲ್ಲಿ ಮಾಜಿ ಕೌನ್ಸಿಲರ್‌ನನ್ನು ಹತ್ಯೆ ಮಾಡಲಾಗಿದೆ.

Vanraj Andekar: ಪುಣೆಯಲ್ಲಿ ಎನ್​ಸಿಪಿಯ ಮಾಜಿ ಕೌನ್ಸಿಲರ್​ನ ಗುಂಡಿಕ್ಕಿ ಹತ್ಯೆ
ವನರಾಜ್​Image Credit source: ABP Live
ನಯನಾ ರಾಜೀವ್
|

Updated on:Sep 02, 2024 | 11:24 AM

Share

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಒಂದೆಡೆ ಸಿದ್ಧತೆ ನಡೆಯುತ್ತಿದೆ, ಮತ್ತೊಂದೆಡೆ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಮಾಜಿ ಕೌನ್ಸಿಲರ್ ವನರಾಜ್ ಅಂದೇಕರ್ ​​ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಪುಣೆ ಪೊಲೀಸರ ಪ್ರಕಾರ, ಆತನ ಮೇಲೆ ಹರಿತವಾದ ಆಯುಧಗಳಿಂದ ಕೂಡ ದಾಳಿ ನಡೆಸಲಾಗಿದೆ. ನಗರದ ನಾನಾ ಪೇಠ ಪ್ರದೇಶದಲ್ಲಿ ಮಾಜಿ ಕೌನ್ಸಿಲರ್‌ನನ್ನು ಹತ್ಯೆ ಮಾಡಲಾಗಿದೆ. ರಾತ್ರಿ 9.30ರ ಸುಮಾರಿಗೆ ತಮ್ಮ ಸಂಬಂಧಿಯೊಂದಿಗೆ ಇಮಾಂದಾರ್ ಚೌಕದಲ್ಲಿ ನಿಂತಿದ್ದರು. ಆಗ ಅವರ ಮೇಲೆ ದಾಳಿ ನಡೆದಿದೆ.

ಕ್ರೈಂ ಬ್ರಾಂಚ್ ಮತ್ತು ಇತರ ವಲಯದ ತಂಡಗಳು ವನರಾಜ್ ಅಂದೇಕರ್ ​​ಅವರನ್ನು ಪತ್ತೆ ಹಚ್ಚಿ ಬಂಧಿಸುವ ಮುನ್ನವೇ ಅವರ ಮೇಲೆ ಹರಿತವಾದ ಆಯುಧಗಳಿಂದ ದಾಳಿ ನಡೆಸಿರುವುದು ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Shocking Video: ಕುಡಿದ ಮತ್ತಿನಲ್ಲಿ ಅಣ್ಣನನ್ನು ಕೊಂದು ಮನೆಯೊಳಗೇ ಹೂತಿಟ್ಟ ತಮ್ಮ; ಶಾಕಿಂಗ್ ವಿಡಿಯೋ ಇಲ್ಲಿದೆ

ದಾಳಿಕೋರರು ಮೊದಲು ಮಾಜಿ ಕೌನ್ಸಿಲರ್ ವನರಾಜ್ ಮೇಲೆ ಹಲ್ಲೆ ನಡೆಸಿ ನಂತರ ಗುಂಡು ಹಾರಿಸಿದ್ದಾರೆ. ವನರಾಜ್ ಅಂದೇಕರ್ ​​ರಕ್ತದಲ್ಲಿ ತೊಯ್ದು ಬಿದ್ದಿದ್ದಾಗ ದಾಳಿಕೋರರು ಅಲ್ಲಿಂದ ಓಡಿ ಹೋಗಿದ್ದಾರೆ.

ವನರಾಜ್ ಅಂದೇಕರ್ ​​ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಾಸೂನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು. ಸದ್ಯ ಪೊಲೀಸರು ಈ ಬಗ್ಗೆ ತನಿಖೆಯಲ್ಲಿ ನಿರತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಕೌಟುಂಬಿಕ ಕಲಹ ಹಾಗೂ ಹಣದ ಕಾರಣದಿಂದ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ಮೂವರ ವಿಚಾರಣೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Mon, 2 September 24

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?